ಕರ್ನಾಟಕ

ನಮ್ಮ ಪಕ್ಷದ ಶಾಸಕರನ್ನು ನಾವೇ ನಿಯಂತ್ರಿಸೋದು: ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು!

Pinterest LinkedIn Tumblr


ಮೈಸೂರು: ನಮ್ಮ ಶಾಸಕರನ್ನು ನಾವೇ ಕಂಟ್ರೋಲ್​ ಮಾಡೋದು; ಇನ್ನೇನು ಜೆಡಿಎಸ್​​ ಮಾಡಲಿಕ್ಕೆ ಆಗುತ್ತಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಸಿಎಂ ಎಚ್​​ಡಿ ಕುಮಾರಸ್ವಾಮಿಯವರಿಗೆ ತಿರುಗೇಟು ನೀಡಿದ್ದಾರೆ. ಸಿಎಂ ಎಚ್​​​.ಡಿ ಕುಮಾರಸ್ವಾಮಿಯವರ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾವೇ ಮೈತ್ರಿ ಸರ್ಕಾರ ರಚಿಸಿದ್ದೇವೆ. ಜೆಡಿಎಸ್​​ನವರೇ ಸಿಎಂ ಆಗಲೀ ಎಂದಿದ್ದೇವೆ. ಇನ್ನು ನಾನು ಸಿಎಂ ಆಗೋ ಪ್ರಶ್ನೆ ಎಲ್ಲಿಂದ ಬಂತು? ಎಂದು ಪ್ರಶ್ನಿಸಿದ್ದಾರೆ.

ನನಗೆ ಸಿಎಂ ಎಚ್​​ಡಿ ಕುಮಾರಸ್ವಾಮಿಯವರ ರಾಜೀನಾಮೆ ವಿಚಾರ ಗೊತ್ತಿಲ್ಲ. ನಾನು ಈ ಬಗ್ಗೆ ಚರ್ಚೆ ಮಾಡ್ತಿನಿ. ಎಸ್.ಟಿ.ಸೋಮಶೇಖರ್‌ಗೆ ಕೆಪಿಸಿಸಿಯಿಂದ ನೋಟೀಸ್ ನೀಡುವ ಬಗ್ಗೆಯೂ ಯಾವುದೇ ಮಾಹಿತಿ ಇಲ್ಲ. ಎಲ್ಲರ ಜೊತೆ ಮಾತನಾಡಿ ಪ್ರತಿಕ್ರಿಯಿಸುತ್ತೇನೆ ಎಂದರು.

ಇನ್ನು ನಮ್ಮ ಶಾಸಕರನ್ನು ನಾವೇ ಕಂಟ್ರೋಲ್ ಮಾಡಬೇಕು. ಇನ್ನೇನು ಜೆ.ಡಿ.ಎಸ್ ಅವರು ಕಂಟ್ರೋಲ್ ಮಾಡೋಕ್ ಆಗುತ್ತಾ..? ಎಂದು ಸಿಎಂ ಕುಮಾರಸ್ವಾಮಿಯವರಿಗೆ ತಿರುಗೇಟು ನೀಡಿದರು. ಹಾಗೆಯೇ ಈ ಬಗ್ಗೆ ಕುಮಾರಸ್ವಾಮಿ ಜೊತೆ ಮಾತುನಾಡುತ್ತೇನೆ. ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ನೀವೆ ಗೊಂದಲ ಸೃಷ್ಟಿಸುತ್ತಿದ್ದೀರಿ ಎಂದು ಜರೆದರು.

ನೀವೆ ಒಬ್ಬೊಬ್ಬರ ಬಳಿ ಒಂದೊಂದು ಹೇಳಿಕೆ ಪಡೆದು ಗೊಂದಲ ಸೃಷ್ಟಿಸುತ್ತಿದ್ದೀರಿ. ಪದೇ ಪದೇ ಅದನ್ನ ಕೇಳಬೇಡಿ. ಇದಕ್ಕೆ ಈಗಾಲೆ ಉತ್ತರ ನೀಡಾಗಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡರು.

Comments are closed.