ಬೆಂಗಳೂರು: ಆಡಿಯೋ ವಾಯ್ಸ್ ನನ್ನದೇ ಆಗಿದ್ದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಹೇಳಿದ್ದ ಬಿಎಸ್ವೈ ಈಗ ರಾಜೀನಾಮೆ ನೀಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಬಾದಾಮಿ ಹೆಲಿಪ್ಯಾಡ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ರಾಜೀನಾಮೆಗೆ ಆಗ್ರಹಿಸಿದರು. ಸಿಎಂ ಕುಮಾರಸ್ವಾಮಿ ಬಜೆಟ್ಗೂ ಮುನ್ನ ನಡೆಸಿದ ಸುದ್ದಿಗೋಷ್ಠಿಯಲ್ಲಿ ಆಡಿಯೋ ತುಣುಕೊಂದನ್ನು ಬಿಡುಗಡೆ ಮಾಡಿದ್ದರು. ಬಳಿಕ ವಿಪಕ್ಷ ನಾಯಕ ಬಿಎಸ್ವೈ ಆಡಿಯೋದಲ್ಲಿರುವ ವಾಯ್ಸ್ ನನ್ನದಲ್ಲ. ಅದು ಮಿಮಿಕ್ರಿ ಮಾಡಿರುವ ವಾಯ್ಸ್. ಎಚ್ಡಿಕೆ ನನ್ನ ಮೇಲೆ ಮಾಡಿರುವ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದು ಘಂಟಾಘೋಷವಾಗಿ ಹೇಳಿದ್ದರು.
ಇದಾದ ಬಳಿಕ ಯಡಿಯೂರಪ್ಪ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಶರಣಗೌಡ ಜೊತೆ ಮಾತನಾಡಿದ್ದು ನಿಜ ಎಂದು ಹೇಳಿದ್ದಾರೆ. ಈಗ ತಪ್ಪೊಪ್ಪಿಕೊಂಡಿರುವ ಬಿಎಸ್ವೈ ವಿರುದ್ಧ ಮೈತ್ರಿ ನಾಯಕರು ವ್ಯಂಗ್ಯ ಮಾಡಿದ್ದಾರೆ. ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ. ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದು ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.
ಸಿಎಂ ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ಕೂಡ ಬಿಎಸ್ವೈ ತಪ್ಪೊಪ್ಪಿಗೆ ವಿಚಾರವಾಗಿ ವ್ಯಂಗ್ಯ ಮಾಡಿದ್ದರು. ಅವರ ತಪ್ಪನ್ನು ಒಪ್ಪಿಕೊಂಡಿರುವುದಕ್ಕೆ ಡಿಕೆಶಿ ಬಿಎಸ್ವೈ ಆತ್ಮಸಾಕ್ಷಿಗೆ ಧನ್ಯವಾದ ತಿಳಿಸಿದ್ದರು. ಧರ್ಮಸ್ಥಳದ ಮಂಜುನಾಥ ಯಡಿಯೂರಪ್ಪನವರಿಗೆ ಬುದ್ಧಿ ಕೊಟ್ಟಿರಬಹುದು ಎಂದು ಎಚ್ಡಿಕೆ ವ್ಯಂಗ್ಯ ಮಾಡಿದ್ದರು.
Comments are closed.