ಕರ್ನಾಟಕ

ಜೆಡಿಎಸ್ ವಿರುದ್ಧ ಇಂದು ರಾಜ್ಯಾದ್ಯಂತ ಬಿಜೆಪಿ ಹೋರಾಟ

Pinterest LinkedIn Tumblr


ಹಾಸನ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರ ಸಾವಿನ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ ನಡೆದಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಇದನ್ನು ಓದಿ: ಹಾಸನ ಬಿಜೆಪಿ ಕಾರ್ಯಕರ್ತನ ಮೇಲೆ ಕಲ್ಲೆಸೆತ ಪ್ರಕರಣ – 8 ಮಂದಿ ವಿರುದ್ಧ ಎಫ್‍ಐಆರ್ ದಾಖಲು

ಜೆಡಿಎಸ್ ದೌರ್ಜನ್ಯ ನಡೆಸಿದೆ ಎಂದು ಆರೋಪಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಅಲ್ಲದೇ ಬೆಳಗ್ಗೆ 10.30ಕ್ಕೆ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಲು ಸಹ ಬಿಎಸ್‍ವೈ ಮುಂದಾಗಿದ್ದಾರೆ. ಈ ಸಂಬಂಧ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೂ ವರದಿ ನೀಡಲು ಬಿಎಸ್‍ವೈ ಚಿಂತನೆ ನಡೆಸಿದ್ದಾರೆ.

ಬುಧವಾರ ನಡೆದ ಘಟನೆಯಲ್ಲಿ ಓರ್ವ ಬೆಂಬಲಿಗ ಗಂಭೀರವಾಗಿ ಗಾಯಗೊಂಡಿದ್ದರು. ಇದನ್ನೇ ಬಿಜೆಪಿ ಪ್ರಬಲ ಅಸ್ತ್ರವಾಗಿಸಿಕೊಳ್ಳುವ ಮುನ್ಸೂಚನೆ ನೀಡಿದೆ. ಜಿಲ್ಲಾ ತಾಲೂಕು ಮಟ್ಟಗಳಲ್ಲಿಯೂ ಬೃಹತ್ ಪ್ರತಿಭಟನೆಗೆ ತೀರ್ಮಾನಿಸಿದೆ. ಘರ್ಷಣೆ ಸಂಬಂಧ ಜಿಲ್ಲಾ ಪಂಚಾಯತ್ ಸದಸ್ಯ ಸೇರಿದಂತೆ ಜೆಡಿಎಸ್‍ನ 8 ಕಾರ್ಯಕರ್ತರು ಹಾಗೂ ಬಿಜೆಪಿಯ ಐವರ ಮೇಲೆ ನಗರದ ಬಡಾವಣೆ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

Comments are closed.