ಕರ್ನಾಟಕ

ಹಾವೇರಿಯಲ್ಲಿ ಯೋಧನ ಮೇಲೆ ಹಲ್ಲೆ

Pinterest LinkedIn Tumblr


ಹೌದು…ಇಂದು[ಶನಿವಾರ]ಹಾವೇರಿ ಬಸ್ ನಿಲ್ದಾಣದಲ್ಲಿ ಕ್ಷುಲ್ಲಕ ಕಾರಣಕ್ಕೆ ಯೋಧ ಹಾಗೂ ಅತನ ಪತ್ನಿ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.

ಬಸ್ ನಲ್ಲಿ ಕುಳಿತುಕೊಳ್ಳಲು ಸೀಟ್ ನೀಡುವ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಕಿಡಿಗೇಡಿಗಳ ಗುಂಪೊಂದು ಯೋಧ ಪರಮೇಶ್ ಫಕ್ಕೀರಪ್ಪ ಹಾಗೂ ಅತನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾರೆ.

ಇನ್ನು ಯೋಧನ ಮೇಲೆ ನಡೆದ ಹಲ್ಲೆಯನ್ನ ಖಂಡಿಸಿ ನೂರಾರು ಯುವಕರು ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದು, ಕೂಡಲೇ ದುಷ್ಕರ್ಮಿಗಳನ್ನ ಬಂಧಿಸುವಂತೆ ಪ್ರತಿಭಟನಕಾರರು ಆಗ್ರಹಿದ್ದಾರೆ.

ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಪ್ರತಿಭಟನಾಕಾರರು ಶಹರಾ ಪೊಲೀಸ್ ಠಾಣೆಯ ಮುಂದೆ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಇಂತಹ ಘಟನೆ ನಡೆದಿರುವುದು ಇದೇನು ಮೊದಲಲ್ಲ. ಈ ಹಿಂದೆಯೂ ಸಹ ದೇಶದ್ರೋಹ ಘಟನೆಗಳಿಗೆ ಹಾವೇರಿ ಸಾಕ್ಷಿಯಾಗಿದೆ. ಇದಕ್ಕೆ ಬ್ರೇಕ್ ಬೀಳೋದು ಯಾವಾಗ..?

Comments are closed.