ಬೆಂಗಳೂರು: ಆದಾಯ ತೆರಿಗೆ ಇಲಾಖೆ (ಐಟಿ) ದಾಖಲಿಸಿದ್ದ ಮೂರು ಪ್ರಕರಣಗಳಲ್ಲಿ ಜಲಸಂಪಸ್ಮೂಲ ಹಾಗೂ ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಐಟಿ ದಾಳಿಯ ವೇಳೆ ಸಚಿವ ಡಿಕೆ ಶಿವಕುಮಾರ್ ಅವರು ಸಾಕ್ಷ್ಯನಾಶ, ತಪ್ಪು ಮಾಹಿತಿ, ಚಟಿ ಹರಿದ ಆರೋಪದ ಅಡಿ ಪ್ರಕರಣ ದಾಖಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ಪ್ರಕರಣಗಳನ್ನು ವಜಾಗೊಳಿಸಿದೆ.
ನಾಲ್ಕನೇ ಪ್ರಕರಣ ಹವಾಲಾ ಸಂಬಂಧ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಮಾರ್ಚ್ 15ಕ್ಕೆ ಆದೇಶ ನೀಡಲಾಗುತ್ತದೆ ಎಂದು ವಿಶೇಷ ನ್ಯಾಯಾಲಯದ ನ್ಯಾ. ಬಿ.ವಿ.ಪಾಟೀಲ್ ಅವರು ತಿಳಿಸಿದ್ದಾರೆ.
ಆರ್ಥಿಕ ವರ್ಷ ಮುಗಿಯುವ ಮುನ್ನವೇ ಐಟಿ ಇಲಾಖೆ ದೂರು ದಾಖಲು ಮಾಡಿದ್ದಾರೆ. ನಾನು ಸಂಪೂರ್ಣ ಲೆಕ್ಕ ನೀಡಲು ಸಿದ್ಧ ಎಂದು ಸಚಿವ ಡಿ.ಕೆ.ಶಿವಕುಮಾರ್ ಅವರು ಕೋರ್ಟ್ ಮುಂದೆ ಹೇಳಿಕೊಂಡಿದ್ದರು.
ಮೂರು ಆರೋಪಗಳಿಂದ ಮುಕ್ತವಾದರೂ ಸಚಿವ ಡಿಕೆ ಶಿವಕುಮಾರ್ ಅವರಿಗೆ ಫುಲ್ ರಿಲೀಫ್ ಸಿಕ್ಕಿಲ್ಲ. ಏಕೆಂದರೆ ಸಚಿವರ ಬಳಿ ಅಘೋಷಿತ ಆಸ್ತಿ ಇದೆ ಎಂದು ಸಾಬೀತು ಪಡಿಸುವ ಸಾಕ್ಷಿಗಳಿದ್ದರೆ ಹೊಸದಾಗಿ ದೂರು ದಾಖಲಿಸಬಹುದು ಎಂದು ಐಟಿಗೆ ಕೋರ್ಟ್ ಅವಕಾಶ ನೀಡಿದೆ.
Comments are closed.