ಕರ್ನಾಟಕ

ಶಿವಮೊಗ್ಗಕ್ಕೆ ಮಧು ಬಂಗಾರಪ್ಪ ಫಿಕ್ಸ್ : ದೇವೇಗೌಡ

Pinterest LinkedIn Tumblr


ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿಯಲಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಹೇಳಿಕೆ ನೀಡಿದ್ದಾರೆ.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ದೇವೇಗೌಡ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮಧು ಬಂಗಾರಪ್ಪ ಅವರ ಹೆಸರನ್ನೇ ಅಂತಿಮ ಮಾಡುತ್ತಿದ್ದೇವೆ. ಮಧು ಅವರ ಗೆಲುವಿಗಾಗಿ ಶ್ರಮಿಸುತ್ತೇವೆ ಎಂದರು.

ಮುಂದುವರಿದು ಮಾತನಾಡಿದ ಅವರು, ನನ್ನ ಮೊಮ್ಮಕ್ಕಳ ಗೆಲುವಿಗೆ ಹೋರಾಡಿದಂತೆ ಮಧು ಬಂಗಾರಪ್ಪನವರ ಗೆಲುವಿಗೆ ನಾವು ಹೋರಾಡುತ್ತೇವೆ. ಎಲ್ಲಾ ನಾಯಕರು ಮಧು ಅವರ ಪರ ಪ್ರಚಾರ ಮಾಡುತ್ತಾರೆ ಎಂದರು.

Comments are closed.