ಕರ್ನಾಟಕ

ಅಂಬಿ​ ನಿಧನದ ಸಮಯದಲ್ಲಿ ಕಾಣಿಸಿಕೊಳ್ಳದ ರಮ್ಯಾ ಈಗ ಪ್ರತ್ಯಕ್ಷ!

Pinterest LinkedIn Tumblr


ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ, ಲೋಕಸಭೆ ಉಪಚುನಾವಣೆಯಿಂದ ಹಿಡಿದು ಅಂಬರೀಷ್​ ನಿಧನದ ಸಮಯದಲ್ಲಿಯೂ ಬೆಂಗಳೂರಿಗೆ ಬಾರದ ರಮ್ಯಾ ಇದೀಗ ಬೆಂಗಳೂರಿನಲ್ಲಿ ದಿಢೀರ್​ ಪ್ರತ್ಯಕ್ಷರಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಸಾಮಾಜಿಕ ಮಾಧ್ಯಮದ ಉಸ್ತುವಾರಿ ಹೊಣೆ ಹೊತ್ತಿರುವ ರಮ್ಯಾ ಇಂದು ಬೆಂಗಳೂರಿನ ಮಾನ್ಯತಾ ಟೆಕ್​ ಪಾರ್ಕ್​ನಲ್ಲಿ ಆಯೋಜಿಸಿರುವ ರಾಹುಲ್​ ಗಾಂಧಿ ಸಂವಾದದ ಹಿನ್ನೆಲೆಯಲ್ಲಿ ರಮ್ಯಾ ಅವರು ಇಲ್ಲಿ ಕಾಣಿಸಿಕೊಂಡಿದ್ದಾರೆ.

ಇಂದು ರಾಜ್ಯ ಪ್ರವಾಸ ಕೈಗೊಂಡಿರುವ ರಾಹುಲ್​ ಗಾಂಧಿ, ಮಧ್ಯಾಹ್ನ ಕಲಬುರಗಿಯಲ್ಲಿ ರಾಜಕೀಯ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆನಂತರ ಬೆಂಗಳೂರಿನ ಮಾನ್ಯತಾ ಟೆಕ್​ ಪಾರ್ಕ್​ನಲ್ಲಿ ರಾಜ್ಯ ಕಾಂಗ್ರೆಸ್​ ಆಯೋಜಿಸಿರುವ ಸಂವಾದದಲ್ಲಿ ಪಾಲ್ಗೊಂಡಿದ್ದಾರೆ. ರಮ್ಯಾ ಅವರು ಕೂಡ ಈ ಸಂವಾದದಲ್ಲಿ ಭಾಗಿಯಾಗಿದ್ದಾರೆ.

Comments are closed.