ಬಳ್ಳಾರಿ: ಬಳ್ಳಾರಿ ಜಿಲ್ಲೆಯಿಂದ ದೇವೇಂದ್ರಪ್ಪ ಹೆಸರು ಅಧಿಕೃತ ಘೋಷಣೆಯಾಗಿದೆ. ದೇವೇಂದ್ರಪ್ಪ ಅನುಭವಿ ರಾಜಕಾರಣಿ. ಏ.1 ರಂದು ನಾಮಪತ್ರ ಸಲ್ಲಿಸಲಿದ್ದು ದೇವೇಂದ್ರಪ್ಪ ಗೆಲ್ಲಿಸಲು ಹಠತೋಟ್ಟಿದ್ದೇವೆ ಎಂದು ಬಿಜೆಪಿ ನಾಯಕ ಬಿ. ಶ್ರೀರಾಮುಲು ಹೇಳಿದರು.
ಉಪಚುನಾವಣೆ ಸೋಲಿನ ಪರಿಸ್ಥಿತಿ ಬೇರೆಯಾಗಿತ್ತು. ಸಾರ್ವತ್ರಿಕ ಚುನಾವಣೆಯಲ್ಲಿ ಆ ರೀತಿ ನಡೆಯಲ್ಲ. ಸಚಿವರು , ಆಪ್ತರು ಲಂಚ ಪ್ರಕರಣದಲ್ಲಿ ಸಿಲುಕಿದ್ದಾರೆ. ನಾಲ್ಕು ಜಿಲ್ಲೆಗೆ ಸೀಮಿತವಾದ ಮುಖ್ಯಮಂತ್ರಿ ಹೈದರಾಬಾದ್ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿದರು.
ಸಿಎಂ ಜನರ ಹಂಗಿನಲ್ಲಿ ಇಲ್ಲ. ರಾಹುಲ್ ಸೋನಿಯಾ ಗಾಂಧಿ ಹಂಗಿನಲ್ಲಿ ಇದ್ದಾರೆ. ಬಾದಾಮಿಯಲ್ಲಿ ವಾಲ್ಮೀಕಿ ಜನರು ನನಗೆ ಮತ ಹಾಕಿಲ್ಲವೆಂದು ಸಿದ್ದರಾಮಯ್ಯ ಹೇಳ್ತಾರೆ. ಇದು ಜನರಿಗೆ ಯಾವ ಸಂದೇಶ ನೀಡ್ತದೆ. ದೇವೇಂದ್ರಪ್ಪ ಅವರನ್ನು ಒಂದು ಲಕ್ಷ ಅಂತರದಲ್ಲಿ ಗೆಲ್ಲಿಸುತ್ತೇವೆ. ದೇವೇಂದ್ರಪ್ಪ ಬೇರೆ ಜಿಲ್ಲೆಯವರಲ್ಲ ಬಳ್ಳಾರಿಯವರೇ. ಉಪಚುನಾವಣೆ ಯಲ್ಲಿ ಹಣ ಮತ್ತ ಅಧಿಕಾರದ ಬಲದಿಂದ ಗೆದ್ದಿದ್ದರು ಎಂದರು.
ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅಭ್ಯರ್ಥಿಯೆಂದು ನಿರ್ಣಯ ಮಾಡಿದ್ದೇವೆ. ವೆಂಕಟೇಶ ಪ್ರಸಾದ್ ,ನಾಗೇಂದ್ರ ಬಗ್ಗೆ ಗೌರವವಿದೆ.. ಪ್ರಸಾದ್ ಪಕ್ಷಕ್ಕೆ ಬರೋವಾಗ ಟಿಕೆಟ್ ಆಸೆಯಿಂದಲ್ಲ ಎಂದು ಅವರೇ ಹೇಳಿದ್ದಾರೆ. ಪ್ರಸಾದ್ ನಮ್ಮ ಜೊತೆಗೆ ಇರುತ್ತಾರೆ. ಪ್ರಸಾದ್ ಪಕ್ಷ ಸೇರೋ ಮೊದಲೇ ದೇವೇಂದ್ರಪ್ಪ ಹೆಸರು ಫೈನಲ್ ಆಗಿತ್ತು ಎಂದರು.
ಬಿಜೆಪಿ ಪಕ್ಷದ ಅಭ್ಯರ್ಥಿ ದೇವೇಂದ್ರಪ್ಪ ಮಾತನಾಡಿ. ಕಾಂಗ್ರೆಸ್ ನಲ್ಲಿ ಸಾಕಷ್ಟು ನೋವು ತಿಂದು ಇಲ್ಲಿಗೆ ಬಂದಿದ್ದೇನೆ. ಆ ಪಕ್ಷ ಈ ಪಕ್ಷ ಬಿಡಿ..ನನ್ನನ್ನು ಬೆಳೆಸಿ ಎಂದು ಮನವಿ ಮಾಡಿಕೊಂಡರು.
Comments are closed.