ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ತಾಯಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಮಾಡುತ್ತಿರುವ ಅಭಿಷೇಕ್, ತಂದೆ ಅಂಬರೀಶ್ ಮತ್ತು ಡಿ.ಬಾಸ್ ದರ್ಶನ್ ಸ್ಟೈಲ್ನಲ್ಲಿ ಡೈಲಾಗ್ ಹೊಡೆದಿದ್ದಾರೆ.
ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಿ.ಹೊಸಹಳ್ಳಿ ಗ್ರಾಮದಲ್ಲಿ ಸುಮಲತಾ ಅವರು ಇಂದು ಪ್ರಚಾರ ನಡೆಸಿದ್ದರು. ಈ ವೇಳೆ ಅಭಿಷೇಕ್ ಅವರು, ಮಂಡ್ಯದವರು ನಮ್ಮ ಮೇಲೆ ಇಟ್ಟಿರುವ ಪ್ರೀತಿ ಬಿಟ್ಟುಕೊಡುವ ಚಾನ್ಸೇ ಇಲ್ಲ ಎಂದು ರೆಬಲ್ ಸ್ಟಾರ್ ಅಂಬರೀಶ್ ಡೈಲಾಗ್ ಹೊಡೆದರು. ಬಳಿಕ ಡಿ ಬಾಸ್ ಡೈಲಾಗ್ ಬೇಕಾ ಎಂದು ಮತದಾರರನ್ನು ಕೇಳಿ, ಅಮ್ಮ ನಡೆದಿದ್ದೆ ದಾರಿ, ತಾಕತ್ತಿದ್ರೆ ಕಟ್ಟಾಕ್ರೋ ಎಂದು ಡೈಲಾಗ್ ಹೇಳಿದರು.
ಅಭಿಷೇಕ್ ಮಾತನಾಡುವಾಗ ಮೈಕ್ ಕೈ ಕೊಟ್ಟಿತು. ಆಗ ಮಗನ ಕೈಯಿಂದ ಮೈಕ್ ಪಡೆದ ಸುಮಲತಾ ಅವರು, ಮೊನ್ನೆ ಕರೆಂಟ್ ತೆಗೆದರು. ಇವತ್ಯಾರು ಮೈಕ್ ಕಟ್ ಮಾಡಿದ್ದು ಎಂದು ವ್ಯಂಗ್ಯವಾಡಿದರು.
Comments are closed.