ಕರ್ನಾಟಕ

ರೈತನ ಮಿತ್ರ ಯಾರು? ಕುಮಾರಸ್ವಾಮಿ, ಎರೆಹುಳು, ಯಡಿಯೂರಪ್ಪ ! ಪ್ರಶ್ನೆ ನೋಡಿ ಕಂಗಾಲಾದ ವಿದ್ಯಾರ್ಥಿಗಳು

Pinterest LinkedIn Tumblr

ಬೆಂಗಳೂರು: ಕೆಲ ಪರೀಕ್ಷೆಗಳಲ್ಲಿ ಕೇಳುವ ಪ್ರಶ್ನೆಗಳು ವಿದ್ಯಾರ್ಥಿಗಳನ್ನು ಕಂಗಾಲಿಗೀಡು ಮಾಡುತ್ತವೆ. ಕೆಲವೊಮ್ಮೆ ಪುಸ್ತಕದ​ ಆಚೆಗೆ ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಪರದಾಡುವ ಪರಿಸ್ಥಿತಿ ನಿರ್ಮಾಣವಾದರೆ, ಇನ್ನೂ ಕೆಲವೊಮ್ಮೆ ಕೆಲ ಪ್ರಶ್ನೆಗಳು ವಿದ್ಯಾರ್ಥಿಗಳನ್ನು ನಗೆಗಡಲಲ್ಲಿ ತೇಲಿಸುತ್ತವೆ. ಇತ್ತೀಚೆಗೆ ಬೆಂಗಳೂರು ಹೈಸ್ಕೂಲ್​ ಒಂದರಲ್ಲಿ ತೃತೀಯ ಭಾಷೆ ಕನ್ನಡ ವಿದ್ಯಾರ್ಥಿಗಳಿಗೆ ಇದೇ ರೀತಿಯ ಪ್ರಶ್ನೆ ಕೇಳಲಾಗಿದೆ. ಪ್ರಶ್ನೆ ಪತ್ರಿಕೆ ನೋಡಿದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಸದ್ಯ ಈ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ರಾಜರಾಜೇಶ್ವರಿ ನಗರದ ಇಂಗ್ಲೀಷ್​​ ಮಾಧ್ಯಮದ ಹೈಸ್ಕೂಲ್​ನಲ್ಲಿ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆದಿತ್ತು. 8ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆಯಲ್ಲಿ ಕೇಳಿದ ಒಂದು ಪ್ರಶ್ನೆ ಎಲ್ಲರ ಗಮನ ಸೆಳೆದಿತ್ತು.

ಅದೇನೆಂದರೆ, ‘ರೈತನ ಮಿತ್ರ ಯಾರು?’ ಈ ಪ್ರಶ್ನೆಗೆ ಮೂರು ಆಯ್ಕೆ ನೀಡಲಾಗಿತ್ತು. ಕುಮಾರಸ್ವಾಮಿ, ಎರೆಹುಳು, ಯಡಿಯೂರಪ್ಪ. ಈ ಪ್ರಶ್ನೆಗಳನ್ನು ನೋಡಿದ ವಿದ್ಯಾರ್ಥಿಗಳು ಒಮ್ಮೆ ಅಚ್ಚರಿಗೊಂಡಿದ್ದಾರೆ. ಯಡಿಯೂರಪ್ಪ ರೈತರ ಪರ ಇದ್ದೇನೆ ಎಂದು ಈ ಮೊದಲಿನಿಂದಲೂ ಹೇಳುತ್ತಾ ಬಂದಿದ್ದಾರೆ. ಕುಮಾರಸ್ವಾಮಿ ನಾನು ಮಣ್ಣಿನ ಮಗ ಎಂದು ಅನೇಕ ಬಾರಿ ಹೇಳಿಕೊಂಡಿದ್ದಿದೆ. ಹಾಗಾಗಿ ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿ ಮಾಡಲು ಈ ಆಯ್ಕೆ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಹೇಳಿದ್ದಾರೆ.

ಸದ್ಯ ಈ ಪ್ರಶ್ನೆ ಪತ್ರಿಕೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಕ್​ ಆಗಿದೆ. ಇದನ್ನು ನೋಡಿದ ಅನೇಕರು ಮೂಗಿನ ಮೇಲೆ ಬೆರಳಿಟ್ಟಿದ್ದಾರೆ.

Comments are closed.