ಕರ್ನಾಟಕ

ಕೊನೆಗೂ ಅಂಗೀಕಾರವಾದ ಉಮೇಶ್ ಜಾಧವ್ ರಾಜೀನಾಮೆ

Pinterest LinkedIn Tumblr

ಬೆಂಗಳೂರು: ಕೊನೆಗೂ ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರವಾಗಿದೆ. ಕಾಂಗ್ರೆಸ್​ ತೊರೆದು ಬಿಜೆಪಿಗೆ ಸೇರಿದ್ದ ಚಿಂಚೋಳಿ ಕ್ಷೇತ್ರದ ಶಾಸಕ ಉಮೇಶ್ ಜಾಧವ್ ಅವರ ರಾಜೀನಾಮೆಯನ್ನು ಇಂದು (ಸೋಮವಾರ ಸ್ಪೀಕರ್ ರಮೇಶ್ ಕುಮಾರ್ ಅವರು ಅಂಗೀಕರಿಸಿದ್ದಾರೆ.

ಮೈತ್ರಿ ಸರ್ಕಾರ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಉಮೇಶ್​ ಜಾಧವ್, ಕಾಂಗ್ರೆಸ್​ ನಾಯಕರ ಮೇಲೆ ಮುನಿಸಿಕೊಂಡು ಕೆಲ ದಿನಗಳ ಹಿಂದಷ್ಟೇ ತಮ್ಮ ಶಾಸಕ ಸ್ಥಾನಕ್ಕೆ ಹಾಗೂ ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ಬಳಿಕ ಉಮೇಶ್ ಜಾಧವ್ ಕಲಬುರಗಿಯಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಿದ್ದರು. ಇದೀಗ ಕಲಬುರಗಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.

ಕಾಂಗ್ರೆಸ್ ತೊರೆದಿದ್ದಲ್ಲದೇ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವುದು ಕಾಂಗ್ರೆಸ್ ನಾಯಕರನ್ನ ಕೆರಳಿಸಿತ್ತು. ಈ ಹಿನ್ನಲೆಯಲ್ಲಿ ಪಕ್ಷಾಂತರ ಕಾಯ್ದೆ ಅಡಿಯಲ್ಲಿ ಉಮೇಶ್ ಜಾಧವ್ ಅವರನ್ನು ಅನರ್ಹ ಮಾಡಲೇಬೇಕೆಂದು ರಾಜ್ಯ ಕಾಂಗ್ರೆಸ್ ಪಣತೊಟ್ಟಿತ್ತು. ಆದ್ರೆ ಅದು ಸಫಲವಾಗಿಲ್ಲ.

Comments are closed.