ಬೆಂಗಳೂರು: ಧರ್ಮಸ್ಥಳ ದೇವರ ದರ್ಶನಕ್ಕೆಂದು ಪತ್ನಿಯನ್ನು ಕರೆದುಕೊಂಡು ಹೋದ ಪತಿ ನೀಚಕೃತ್ಯ ಎಸಗಿದ್ದಾನೆ.
ಸದಾ ವರದಕ್ಷಿಣೆಗಾಗಿ ಪತ್ನಿಯನ್ನು ಪೀಡಿಸುತ್ತಿದ್ದ ಪತಿ, ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈಯ್ಯಲು ಯತ್ನಿಸಿದ್ದಾನೆ. ಬೆಂಗಳೂರು ರಾಜಾಜಿನಗರ ನಿವಾಸಿ ನವೀನ್ ಆರೋಪಿಯಾಗಿದ್ದು ಈಗ ಆತನನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ.
ಟೆಕ್ಕಿ ನವೀನ್ ಹಾಗೂ ಆತನ ಪತ್ನಿ ರಾಜಾಜಿನಗರದಲ್ಲಿ ವಾಸವಾಗಿದ್ದರು. ವರದಕ್ಷಿಣೆಗಾಗಿ ಸದಾ ಪೀಡಿಸುತ್ತಿದ್ದ. ಇತ್ತೀಚೆಗೆ ಅವರಿಬ್ಬರ ನಡುವೆ ಕಲಹವೂ ಆಗಿತ್ತು. ಆದರೆ ನವೀನ್ ಧರ್ಮಸ್ಥಳಕ್ಕೆ ಪತ್ನಿಯನ್ನು ಕರೆದೊಯ್ದಿದ್ದ. ಅಲ್ಲಿಂದ ಬರುವಾಗ ಕುಣಿಗಲ್ ಬಳಿ ಬರುತ್ತಿದ್ದಂತೆ ಕಬ್ಬಿಣದ ರಾಡ್ನಿಂದ ಪತ್ನಿ ತಲೆಗೆ ಬಲವಾಗಿ ಹೊಡೆದಿದ್ದಾನೆ.
ಆದರೆ ಅದೃಷ್ಟವಶಾತ್ ಆಕೆ ತಪ್ಪಿಸಿಕೊಂಡು ಸಾರ್ವಜನಿಕರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಮಹಿಳೆಯ ಪಾಲಕರು ನೀಡಿದ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Comments are closed.