ಕರ್ನಾಟಕ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ರ‍್ಯಾಲಿಯಲ್ಲಿ ಮೋದಿ ಪರ ಘೋಷಣೆ

Pinterest LinkedIn Tumblr


ಕಾರವಾರ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ರ‍್ಯಾಲಿ ವೇಳೆ ಮೋದಿ ಪರ ಘೋಷಣೆ ಕೂಗಿ, ಗಲಾಟೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಮುಖ್ಯರಸ್ತೆಯಲ್ಲಿ ನಡೆದಿದೆ.

ಶಿರಸಿಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆನಂದ್ ಆಸ್ನೋಟಿಕರ್ ನೇತೃತ್ವದಲ್ಲಿ ಪ್ರಚಾರ ಮಾಡಲಾಗುತಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ, ಮೋದಿ ಎಂದು ಘೋಷಣೆ ಕೂಗಿದರು. ಇದರಿಂದಾಗಿ ಕೋಪಗೊಂಡ ಮೈತ್ರಿ ಪಕ್ಷದ ಕಾರ್ಯಕರ್ತರು ರಾಹುಲ್ ಎಂದು ಕೂಗಿದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರ್ಯಕರ್ತರು ಮತ್ತು ಬಿಜೆಪಿ ಮಧ್ಯೆ ಮಾತಿನ ಚಕಮಕಿ ಆರಂಭವಾಯಿತು. ಬಳಿಕ ಕೈ ಮಿಲಾಯಿಸುವ ಹಂತ ತಲುಪಿತ್ತು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.

Comments are closed.