ಕರ್ನಾಟಕ

ಡಾ.ರಾಜ್ ಕುಮಾರ್ ಹುಟ್ಟುಹಬ್ಬ: ಹಳೆಯ ನೆನಪು ಮೆಲುಕು ಹಾಕಿದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Pinterest LinkedIn Tumblr


ಮೈಸೂರು: ಇಂದು ನಟಸಾರ್ವಭೌಮ ಡಾ. ರಾಜ್‍ಕುಮಾರ್ ಅವರ 90ನೇ ಜಯಂತಿಯಾಗಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹೆಳೆಯ ನೆನಪನ್ನು ಮೆಲುಕು ಹಾಕಿದ್ದಾರೆ.

ಯದುವೀರ್ ಅವರು ತನ್ನ ತಾತ ಜಯಚಾಮರಾಜ ಒಡೆಯರ್ ಅವರು ಡಾ. ರಾಜ್‍ಕುಮರ್ ಅವರಿಗೆ ಸನ್ಮಾನಿಸುತ್ತಿರುವ ಫೋಟೋ ಜೊತೆ ಶುಭಾಶಯ ತಿಳಿಸಿದ್ದಾರೆ. ನಟಸಾರ್ವಭೌಮ, ಕನ್ನಡ ಚಿತ್ರರಂಗದ ಧ್ರುವತಾರೆ ಎಂದು ಯದುವೀರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಸ್ಮರಿಸಿದ್ದಾರೆ.

ಪೋಸ್ಟ್ ನಲ್ಲಿ ಏನಿದೆ?
ಕನ್ನಡ ಚಲನಚಿತ್ರರಂಗದ ಮೇರು ನಟ, ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ನಟಸಾರ್ವಭೌಮ ಡಾ. ರಾಜ್‍ಕುಮಾರ್ ಅವರ 90ನೇ ಜನ್ಮದಿನದಂದು ಅವರನ್ನು ಸ್ಮರಿಸುತ್ತಿದ್ದೇವೆ. ಡಾ. ರಾಜ್‍ಕುಮಾರ್ ಅವರು ಶ್ರೀಮನ್ ಮಹಾರಾಜ ಜಯಚಾಮರಾಜ ಒಡೆಯರವರಿಂದ ಗೌರವಿಸಲ್ಪಡುತ್ತಿರುವುದು ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

Comments are closed.