ಕರ್ನಾಟಕ

ಸಮ್ಮಿಶ್ರ ಸರ್ಕಾರದ ಪತನಕ್ಕೆ ದೇವೇಗೌಡ, ಸಿದ್ದರಾಮಯ್ಯ ಹೇಳಿಕೆಗಳು ಸಾಕ್ಷಿ!

Pinterest LinkedIn Tumblr


ಮೈತ್ರಿ ಸರ್ಕಾರದ ಪತನಕ್ಕೆ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗಳೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿಯ ಕುಂದಗೋಳದಲ್ಲಿ ಮಾಧ್ಯಮಗಳೊಂದಿಗೆ ಸೋಮವಾರ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಪತನಕ್ಕೆ ದೇವೇಗೌಡ, ಸಿದ್ದರಾಮಯ್ಯ ಹೇಳಿಕೆಗಳೆ ಸಾಕ್ಷಿ , ಮೈತ್ರಿ ಸರ್ಕಾರ ಪತನ ಆದರೆ ಅದರ ಲಾಭ ಪಡೆಯುತ್ತೇವೆ. ಅಧಿಕಾರ, ಹಣ ಬಲ ಚುನಾವಣೆ ಕೆಲಸ ಮಾಡಲ್ಲ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ಇದೇ ವೇಳೆ ನಂತರ ಪ್ರತಿಕ್ರಿಯೇ ನೀಡಿದ ಅವರು, ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡರ ನಾಮಪತ್ರ ಸಲ್ಲಿಕೆಯಾಗಿದೆ. ಸಂಘಟನೆಯ ಮೂಲಕ ಕುಂದಗೋಳದಲ್ಲಿ ಬಿಜೆಪಿ ಗೆಲ್ಲಲಿದೆ. ಚಿಂಚೋಳಿಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲವು ಸಾಧಿಸಲಿದ್ದಾರೆ. 23 ರ ಫಲಿತಾಂಶ ನಂತರ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ ಆಗಲಿದೆ. ರಾಜ್ಯ ರಾಜಕಾರಣ ದಿಕ್ಸೂಚಿ ಆಗಲಿದೆ. ಸಮ್ಮಿಶ್ರ ಸರ್ಕಾರ ಏನೆ ಪ್ರಯತ್ನ ಮಾಡಲಿ. ನಮ್ಮ ಕಾರ್ಯಕರ್ತರು ಮತಗಟ್ಟೆಯ ಪೇಜ್ ನಲ್ಲಿದ್ದಾರೆ ಎಂದರು.

ಜಲಸಂಪನ್ಮೂಲ ಸಚಿವ ಡಿ. ಕೆ ಶಿವಕುಮಾರ್ ಸೇರಿ ನೂರು ಜನ ಬಂದರು ಕೂಡ ಬಿಜೆಪಿ ಗೆಲುವು ಖಚಿತ ಎಂದು ಮೈತ್ರಿ ಸರ್ಕಾರಕ್ಕೆ ಚಾಲೆಂಜ್ ಮಾಡಿದರು.

Comments are closed.