ಕರ್ನಾಟಕ

ಚಿತ್ರದುರ್ಗದಲ್ಲಿ ಅಪಘಾತ: ಬೆಂಗಳೂರಿನ ಒಂದೇ ಕುಟುಂಬದ 5 ಮಂದಿ ಸಾವು

Pinterest LinkedIn Tumblr


ಚಿತ್ರದುರ್ಗ: ಹಿರಿಯೂರು ಹೊರವಲಯದಲ್ಲಿ ಬುಧವಾರ ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಐವರು ದುರ್ಮರವನ್ನಪ್ಪಿದ್ದಾರೆ. ಇತರ 6 ಮಂದಿಗೆ ಗಂಭೀರ ಗಾಯವಾಗಿದೆ. ಆತಿಥ್ಯ ಹೋಟೆಲ್ ಬಳಿ ನತದೃಷ್ಟರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು, ಲಾರಿಗೆ ಡಿಕ್ಕಿ ಹೊಡೆದು ಈ ದರುಂತ ಸಂಭವಿಸಿದೆ. ಕಾರಿನ ಟಯರ್ ಬ್ಲಾಸ್ಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರೆಲ್ಲರೂ ಒಂದೇ ಕುಟುಂಬದವರಾಗಿದ್ದಾರೆ. ಬೆಂಗಳೂರಿನ ಜಂಬುಸವಾರಿ ನಗರದ ನಿವಾಸಿಗಳೆನ್ನಲಾಗಿದೆ. ಇಬ್ಬರು ಮಹಿಳೆಯರು, ಇಬ್ಬರು ಬಾಲಕಿಯರು ಹಾಗೂ ಒಂದು ಹೆಣ್ಣು ಮಗು ಈ ಅಪಘಾತದಲ್ಲಿ ಸತ್ತಿದ್ದಾರೆ. ಸತ್ತವರನ್ನು ತಾಯವ್ವ(50), ಲತಾ(26), ಸುಷ್ಮಿತಾ(13), ವರ್ಣಿಕಾ(9) ಮತ್ತು ಜಾನ್ಹವಿ(3) ಎಂದು ಗುರುತಿಸಲಾಗಿದೆ.

ಭದ್ರಾವತಿಯಿಂದ ಹಿರಿಯೂರು ಮಾರ್ಗವಾಗಿ ಬೆಂಗಳೂರಿಗೆ ಹೋಗುವಾಗ ಈ ದುರಂತ ಸಂಭವಿಸಿದೆ. ಗಾಯಗೊಂಡವರನ್ನು ಚಿತ್ರದುರ್ಗ ಮತ್ತು ಹಿರಿಯೂರಿನ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.