ಕರ್ನಾಟಕ

ಓಟು ಕೇಳಲು ಹೋದ ವಿ.ಸೋಮಣ್ಣಗೆ ಗ್ರಾಮಸ್ಥರಿಂದ ಘೇರಾವ್

Pinterest LinkedIn Tumblr


ಕಲಬುರಗಿ: ಚಿಂಚೋಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲು ಹೋಗಿದ್ದ ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ಗ್ರಾಮಸ್ಥರು ಘೇರಾವ್ ಹಾಕಿದ ಘಟನೆ ಇಂದು ನಡೆಯಿತು.

ಚಿಂಚೋಳಿ ತಾಲೂಕಿನ ಮೋಘಾ ಗ್ರಾಮದಲ್ಲಿ ಅವಿನಾಶ್ ಜಾಧವ್ ಪರ ಪ್ರಚಾರ ಮಾಡಲು ಮಾಜಿ ಸಚಿವ ಸೋಮಣ್ಣ ಹಾಗೂ ಶಾಸಕ ದತ್ತಾತ್ರೇಯ ಪಾಟೀಲ್ ಹೋಗಿದ್ದರು. ಈ ವೇಳೆ ಸೇರಿದ ಗ್ರಾಮಸ್ಥರು, ಯುವಕರು ಉಮೇಶ್ ಜಾಧವ್ ವಿರುದ್ಧ ಅಸಮಾಧಾನ ಹೊರಹಾಕಿದರು.

ಉಮೇಶ್ ಜಾಧವ್ ಅವರನ್ನು ಎರಡು ಬಾರಿ ಆಯ್ಕೆ ಮಾಡಿದ್ದೇವೆ. ಆದರೆ ಅವರು ಕಾರಣವಿಲ್ಲದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಯಾಕೆ? ಕಾಂಗ್ರೆಸ್ ಬಿಟ್ಟು ಹೋಗಿದ್ದು ಯಾಕೆ ಎಂದು ಪ್ರಶ್ನಿದ್ದಾರೆ. ಅಷ್ಟೇ ಅಲ್ಲದೇ ರಾಜೀನಾಮೆಗೆ ಸೂಕ್ತ ಕಾರಣ ಹೇಳಬೇಕು ಆಗ್ರಹಿಸಿದರು.

ಗ್ರಾಮಸ್ಥರು ಮನವೊಲಿಸುವಲ್ಲಿ ದತ್ತಾತ್ರೇಯ ಪಾಟೀಲ್ ಹಾಗೂ ವಿ.ಸೋಮಣ್ಣ ವಿಫಲರಾದರು. ಹೀಗಾಗಿ ಮಾಜಿ ಸಚಿವರ ಸೂಚನೆ ಮೇರೆಗೆ ಶಾಸಕ ದತ್ತಾತ್ರೇಯ ಪಾಟೀಲ್ ಅವರು ಗ್ರಾಮದಲ್ಲಿರುವ ಬಿ.ಎಸ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮರಳಿದರು.

Comments are closed.