ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ನೂರಾರು ಸಮೀಕ್ಷೆಗಳು ನಡೆಯುತ್ತಿರೋ ಬೆನ್ನಲ್ಲೇ, ಕಾಂಗ್ರೆಸ್ ಕೂಡ ನಿಖರ ಸಮೀಕ್ಷೆ ನಡೆಸಿದ್ದು, ಅದರ ವರದಿ ಬಹಿರಂಗವಾಗಿದೆ.
KPCC ಕರ್ನಾಟಕದ ಎಲ್ಲಾ 28 ಕ್ಷೇತ್ರಗಳ ಸರ್ವೇಯನ್ನು ಮಾಡಿಸಿದ್ದು, ಸಮೀಕ್ಷೆಯಲ್ಲಿ ಕಾಂಗ್ರೆಸ್ಗೆ 10, JDSಗೆ 3, ಬಿಜೆಪಿಗೆ 15 ಸ್ಥಾನ ಸಿಕ್ಕಿದೆ. ಬೆಂಗಳೂರು ಗ್ರಾಮೀಣ, ಬೆಂಗಳೂರು ಉತ್ತರ, ಚಾಮರಾಜನಗರ, ಕೋಲಾರ, ಚಿಕ್ಕೋಡಿ, ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಚಿತ್ರದುರ್ಗ ಕಾಂಗ್ರೆಸ್ ಪಾಲಾಗಲಿವೆ.
ಹಾಸನ, ಮಂಡ್ಯ, ತುಮಕೂರು 3 ಕ್ಷೇತ್ರಗಳನ್ನು ಜೆಡಿಎಸ್ ತೆಕ್ಕೆಗೆ ತಗೆದುಕೊಳ್ಳಲಿದೆ. ಬೆಂಗಳೂರು ಸೆಂಟ್ರಲ್, ಬೆಂಗಳೂರು ದಕ್ಷಿಣ, ಮೈಸೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ದಾವಣಗೆರೆ, ಬೆಳಗಾವಿ, ಬೀದರ್, ವಿಜಯಪುರ, ಕೊಪ್ಪಳ, ಹಾವೇರಿ ಲೋಕಸಭಾ ಕ್ಷೇತ್ರಗಳಲ್ಲಿ ಕಮಲ ಅರಳಲಿದೆ ಎಂದು ಕೆಪಿಸಿಸಿ ಸಮೀಕ್ಷೆ ಹೇಳಿದೆ.
Comments are closed.