ಕರ್ನಾಟಕ

ಸರ್ಕಾರ ಬೀಳಿಸಲು ಸಿದ್ದರಾಮಯ್ಯ ಕುಮ್ಮಕ್ಕು: ಅವರ ಆಪ್ತರನ್ನು ಅಮಾನತುಗೊಳಿಸಿ

Pinterest LinkedIn Tumblr


ಶಿವಮೊಗ್ಗ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಐದು ವರ್ಷಗಳ ಅವಧಿ ಪೂರ್ಣ ಮಾಡಬೇಕು ಎಂಬುದೇ ತಮ್ಮ ಆಸೆಯಾಗಿದೆ. ಆದರೆ ಅದಕ್ಕೆ ಕಾಂಗ್ರೆಸ್ ನಾಯಕರು ಅವಕಾಶ ಕೊಡುತ್ತಿಲ್ಲ ಎಂಬುದನ್ನು ಸಿಎಂ ಅರ್ಥ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಅಭದ್ರತೆ ಕಾಡಬಾರದು ಎಂದಾದರೇ ಸಿದ್ದರಾಮಯ್ಯ ಅವರ ಬೆಂಬಲಿಗರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಬೇಕು ಎಂದು ಬಿಜೆಪಿ ಮುಖಂಡ ಕೆ.ಎಸ್ ಆಶ್ವರಪ್ಪ ಒತ್ತಾಯಿಸಿದ್ದಾರೆ.

ತಮ್ಮ ಬೆಂಬಲಿಗರ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಮೈತ್ರಿ ಸರ್ಕಾರಕ್ಕೆ ಸಿದ್ದರಾಮಯ್ಯ ಅವರೇ ಕಂಟಕರಾಗಿದ್ದಾರೆ ಎಂದು ದೂರಿದ್ದಾರೆ,

ಸಿದ್ದರಾಮಯ್ಯ ಒಂದು ಕಡೆ ತೊಟ್ಟಿಲು ತೂಗುತ್ತಾರೆ ಮತ್ತೊಂದು ಕಡೆ ಮಗವನ್ನು ಚಿವುಟುತ್ತಾರೆ ಎಂದು ಆರೋಪಿಸಿದ್ದಾರೆ.

Comments are closed.