ಮೈಸೂರು: ಮೊದಲು ಜಿಟಿಡಿ ನಂತರ ವಿಶ್ವನಾಥ್ ಆಮೇಲೆ ಯಾರೋ ಗೊತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಈ ಟ್ವೀಟ್ ಬಗ್ಗೆ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯ ವಿರುದ್ದ ನಾನು ಯಾವತ್ತೂ ಮಾತನಾಡಿಲ್ಲ. ಅವರ ಮೇಲೆ ಯಾವಾಗಲೂ ಗೌರವ ಇದೆ. ಅವರು ನನ್ನ ಬಗ್ಗೆ ಟ್ವೀಟ್ ಮಾಡಿದ್ದಾರಂತೆ. ಅದನ್ನ ನಾನು ನೋಡಿಲ್ಲ. ಅವರು ಮೊದಲು ಜಿಟಿಡಿ ಮಾತನಾಡಿದ್ರು ಈಗ ವಿಶ್ವನಾಥ್ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. ಆದ್ರೆ ಅವರೇನು ಚುನಾವಣೆ ಬಗ್ಗೆ ಮಾತನಾಡಿಲ್ಲ. ಅವರ್ಯಾಕೆ ನನ್ನ ಹೆಸರು ಹೇಳಿದ್ದಾರೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಇನ್ನು ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜಿ.ಟಿ.ದೇವೇಗೌಡರು, ಜನಪ್ರತಿನಿಧಿಗಳು ಜವಬ್ದಾರಿಯಿಂದ ಮಾತನಾಡಬೇಕು. ಸಿದ್ದರಾಮಯ್ಯನವರೇ 5 ವರ್ಷ ಕುಮಾರಸ್ವಾಮಿನೇ ಸಿಎಂ ಅಂತ ಹೇಳಿದ್ದಾರೆ. ಇನ್ಯಾಕೆ ಬೇರೆ ಮಾತು..? ಅವರ ಹೇಳಿಕೆಗಳನ್ನ ಗಂಭೀರವಾಗಿ ಪರಿಗಣಿಸಬಾರದು. 23ರ ರಿಸಲ್ಟ್ ಬರುವವರೆಗೂ ಎಲ್ಲರ ಹೇಳಿಕೆಯೂ ವೇಸ್ಟ್. ಯಾರೂ ಏನೇ ಹೇಳಿಕೆ ಕೊಟ್ಟರು ರಿಸಲ್ಟ್ ಬರೋವರೆಗೆ ಎಲ್ಲವೂ ವೇಸ್ಟ್ ಎಂದು ಜಿಟಿಡಿ ಹೇಳಿದ್ದಾರೆ.
Comments are closed.