ಕಲಬುರಗಿ: ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ಮತಬೇಟೆ ಶುರು ಮಾಡಿದ್ದು ಮಾತದಾನಕ್ಕೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿ ಇದೆ.
ಕಲಬುರ್ಗಿಯ ಕಾಳಗಿಯಲ್ಲಿ ಮಾಧ್ಯಮ ಜೊತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು, ಲಿಂಗಾಯತರು ಕಾಂಗ್ರೆಸ್ಗೆ ವೋಟು ಹಾಕಿದರೆ ಅಪರಾಧ ಮಾಡಿದಂತೆ ಎಂದು ವೀರಶೈವ ಲಿಂಗಾಯತರಿಗೆ ಕರೆ ಕೊಟ್ಟಿದ್ದಾರೆ.
ಇನ್ನು ಬಿಎಸ್ ಯೂಡಿಯೂರಪ್ಪ ಹೇಳಿಕೆಗೆ ಠಕ್ಕರ್ ಕೊಡಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದ್ದು ಚಿಂಚೋಳಿಯಲ್ಲಿಂದು ಕಾಂಗ್ರೆಸ್ ವೀರಶೈವ ಲಿಂಗಾಯತ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಡಿಸಿಎಂ ಡಾ ಜಿ. ಪರಮೇಶ್ವರ್, ಗೃಹಸಚಿವ ಎಂ.ಬಿ ಪಾಟೀಲ್, ಈಶ್ವರ್ ಖಂಡ್ರೆ ಭಾಗಿಯಾಗಿದ್ದಾರೆ.
ಸದ್ಯ ಮೇ 19ಕ್ಕೆ ಉಪಚುನಾವಣೆ ನಡೆಯಲಿದ್ದು ಎರಡು ಪಕ್ಷದವರು ಪ್ರಚಾರಕ್ಕೆ ಮತ್ತಷ್ಟು ವೇಗ ನೀಡಲಿದ್ದಾರೆ. ಚಿಂಚೋಳಿ ಕ್ಷೇತ್ರದಲ್ಲಿ ಡಾ. ಉಮೇಶ್ ಜಾಧವ್ ಕಾಂಗ್ರೆಸ್ ಶಾಸಕಾಂಗ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರಿರುವುದರಿಂದ ಆ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.
ಕುಂದಗೋಳ ಕ್ಷೇತ್ರದ ಶಾಸಕರಾಗಿದ್ದ ಸಿಎಸ್ ಶಿವಳ್ಳಿ ಅವರ ಅಕಾಲಿಕ ಮರಣದ ಹಿನ್ನೆಲೆ ಆ ಕ್ಷೇತ್ರಕ್ಕೆ ಉಪಚುನಾವಣಾ ನಡೆಯಲಿದೆ.
Comments are closed.