ತುಮಕೂರು: ‘ಬಿಜೆಪಿಯವರ ಅಕ್ಕ-ತಂಗಿ ಅವರನ್ನು ಗೋವಾಗೆ ಕರೆದುಕೊಂಡು ಹೋಗಿ ಹನಿಮೂನ್ ಮಾಡ್ತಿನಿ’ ಎಂದು ಜೆಡಿಎಸ್ ಕಾರ್ಯಕರ್ತ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತ ಶಫೀ ಅವರಿಂದ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದು ಮಾಜಿ ಶಾಸಕ ಸುರೇಶ್ ಗೌಡ ಫ್ಯಾನ್ಸ್ ಪೇಜ್ನಲ್ಲಿ ಶಾಸಕ ಗೌರಿಶಂಕರ್ ಬಗ್ಗೆ ಟೀಕೆ ಮಾಡಲಾಗಿತ್ತು.
ಬರದ ಸಂದರ್ಭದಲ್ಲಿ ಶಾಸಕ ಗೌರಿಶಂಕರ ಮೋಜು ಮಸ್ತಿಗಾಗಿ ಸಿಂಗಾಪುರಕ್ಕೆ ಹೋಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದು ಪೋಸ್ಟ್ ಮಾಡಲಾಗಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಜೆಡಿಎಸ್ ಕಾರ್ಯಕರ್ತ ಕಾಮೆಂಟ್ ಮಾಡಿದ್ದಾರೆ.
ಸದ್ಯ ಡಿ. ಕೊರಟಗೆರೆಯಲ್ಲಿರುವ ತೆನೆ ಕಾರ್ಯಕರ್ತ ಶಫೀ ಮನೆಯ ಮುಂದೆ ಬಿಜೆಪಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತದ್ದು ಶಫೀ ಅವರನ್ನು ಬಂಧಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ.
Comments are closed.