ಕರ್ನಾಟಕ

ಅವರಿಗೆ ಮುಖ್ಯಮಂತ್ರಿ ಸ್ಥಾನಕ್ಕೂ ಮೀರಿದ ವ್ಯಕ್ತಿತ್ವ ಇದೆ: ಹೆಚ್. ವಿಶ್ವನಾಥ್

Pinterest LinkedIn Tumblr


ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಯಾರನ್ನೂ ಹೋಲಿಕೆ ಮಾಡಬಾರದು, ಖರ್ಗೆಗೆ ಮುಖ್ಯಮಂತ್ರಿ ಸ್ಥಾನಕ್ಕೂ ಮೀರಿದ ವ್ಯಕ್ತಿತ್ವ ಇದೆ. ಉತ್ತರ ಕರ್ನಾಟಕಕ್ಕೆ ಅವರ ಕೊಡುಗೆ ಅಪಾರ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಹೇಳಿದ್ದಾರೆ.

ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿ- ಹೆಚ್. ವಿಶ್ವನಾಥ್

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಪರ ವಿಶ್ವನಾಥ್ ಬ್ಯಾಟಿಂಗ್ ಮಾಡಿದ್ದಾರೆ. ಕಾರ್ಮಿಕ ಸಚಿವರಾಗಿ, ಗೃಹ ಸಚಿವರಾಗಿ ಸಾಕಷ್ಟು ಕೊಡುಗೆ ನೀಡಿದ್ದಾರೆ. 371 ಕಾಯ್ದೆ ಜಾರಿ ಮಾಡಿದ್ದು ಖರ್ಗೆ . ಅವರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ತಪ್ಪಿದೆ ಅಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಈ ಪ್ರಶ್ನೆಕೇಳಿ ಎಂದು ವಿಶ್ವನಾಥ್ ಹೇಳಿದರು.

ನಂತರ ಪ್ರತಿಕ್ರಿಯೆ ನೀಡಿದ ಅವರು, ಮೇ 24 ಜೆಡಿಎಸ್ ಶಾಸಕರ ಸಭೆ ಇದೆ. 23 ರ ಲೋಕಸಭೆ ಫಲಿತಾಂಶದ ಪರಿಣಾಮಗಳ ಕುರಿತು ಚರ್ಚೆ ನಡೆಸುತ್ತೇವೆ, ಲೋಕಸಭೆ ಫಲಿತಾಂಶದಿಂದ ಜೆಡಿಎಸ್ ಗೆ ಯಾವುದೇ ಆತಂಕ ಇಲ್ಲ ಎಂದು ತಿಳಿಸಿದರು.

Comments are closed.