ಕರ್ನಾಟಕ

ಸಾಮಾಜಿಕ ಜಾಲತಾಣದಲ್ಲಿ ನಾಥೂರಾಂ ಗೋಡ್ಸೆ ಹೊಗಳಿದ್ದಕ್ಕೆ ತುಮಕೂರು ಯುವ ಮೋರ್ಚಾ ಜಿಲ್ಲಾಧ್ಯಕ್ಷ ಉಚ್ಚಾಟನೆ ಮಾಡಿದ ಯಡಿಯೂರಪ್ಪ

Pinterest LinkedIn Tumblr


ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ನಾಥೂರಾಂ ಗೋಡ್ಸೆಯನ್ನು ಹೊಗಳಿದ್ದಕ್ಕೆ ತುಮಕೂರಿನ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಟಿ.ಎಚ್.ಹನುಮಂತರಾಜು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಕ್ಷದಿಂದ ಉಚ್ಛಾಟಿಸಿದ್ದಾರೆ.

ಸಾದ್ವಿ,ಅನಂತಕುಮಾರ್ ಹೆಗ್ಡೆ ಮತ್ತು ನಳಿನ್ ಕುಮಾರ್ ಅನ್ನು ಉಚ್ಛಾಟನೆ ಮಾಡಲಿ ಯಡಿಯೂರಪ್ಪ! ಪಾಪ ತುಮಕೂರು ಪ್ರಾಣಿನ ಉಚ್ಛಾಟನೆ ಮಾಡಿದ್ದಾನೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸ್ಥಾನದಿಂದ ಟಿ.ಎಚ್.ಹನುಮಂತರಾಜುರನ್ನು ತೆಗೆದು ಹಾಕಿದ್ದಾರೆ‌. ಅಲ್ಲದೇ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಕೂಡ ಉಚ್ಚಾಟಿಸಲಾಗಿದೆ ಎಂದು ತಿಳಿದುಬಂದಿದೆ.

”ಮಹಾತ್ಮಾ ಗಾಂಧಿ ಹತ್ಯೆ ಮಾಡಿದ ನಾಥೂರಾಂ ಗೋಡ್ಸೆಯನ್ನು ಹೊಗಳಿ ತಮ್ಮ ಪೋಸ್ಟ್‌ನಲ್ಲಿ ಪ್ರದರ್ಶಿಸಿರುವುದರಿಂದ ತಮ್ಮನ್ನು ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಿರುವುದಲ್ಲದೇ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಕೂಡ ಉಚ್ಚಾಟಿಸಲಾಗಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪತ್ರದ ಮೂಲಕ ತಿಳಿಸಿದ್ದಾರೆ.

”ತನ್ನ ಅಸ್ಥಿಯೂ ಕೂಡ ಭಾರತದಲ್ಲಿ ಹರಿಯುವ ಸಿಂಧೂ ನದಿಯಲ್ಲಿ ವಿಸರ್ಜಿಸಬೇಕೆಂದು ನೇಣು ಕುಣಿಕೆಗೆ ತಲೆ ಕೊಟ್ಟ ಮಹಾನ್‌ ರಾಷ್ಟ್ರಭಕ್ತ ನಾಥೂರಾಂ ಗೋಡ್ಸೆ” ಎಂದು ಟಿ.ಎಚ್.ಹನುಮಂತರಾಜು ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು. ಈ ಹಿನ್ನೆಲೆ ಅವರನ್ನು ಉಚ್ಛಾಟಿಸಲಾಗಿದೆ ಎಂದು ತಿಳಿದುಬಂದಿದೆ.

ಭೋಪಾಲ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್‌ ಗೋಡ್ಸೆ ಯಾವತ್ತೂ ದೇಶಭಕ್ತನೇ ಎಂದು ಹೇಳಿಕೆ ನೀಡಿದ ಬಳಿಕ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಸ್ವತಃ ಬಿಜೆಪಿಯೇ ಸಾಧ್ವಿ ಹೇಳಿಕೆಯಿಂದ ಅಂತರ ಕಾಯ್ದುಕೊಂಡು ಖಂಡಿಸಿತ್ತು.

ಅಲ್ಲದೆ, ‘ಗೋಡ್ಸೆ ಪರ ಮಾತನಾಡುವಾಗ ಅಪರಾಧ ಭಾವನೆ ಬೇಕಿಲ್ಲ. ಅದಕ್ಕಾಗಿ ಯಾಕೆ ಕ್ಷಮೆ ಕೋರಬೇಕು? ಎಂದು ಅನಂತ ಕುಮಾರ್ ಹೆಗಡೆಯವರ ಹೆಸರಿನಲ್ಲಿ ಟ್ವೀಟ್ ಮಾಡಲಾಗಿತ್ತು. ಬಳಿಕ ತನ್ನ ಟ್ವಿಟರ್ ಖಾತೆ ಹ್ಯಾಕ್‌ ಆಗಿದೆ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಹೇಳಿಕೊಂಡಿದ್ದರು.

ಜತೆಗೆ, ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಕೂಡ ಇದೇ ಧಾಟಿಯಲ್ಲಿ ಟ್ವೀಟ್ ಮಾಡಿ, ನಾಥೂರಾಂ ಗೋಡ್ಸೆ ಕೊಂದವರ ಸಂಖ್ಯೆ 1, ಅಜ್ಮಲ್ ಕಸಬ್ ಕೊಂದವರ ಸಂಖ್ಯೆ 72, ರಾಜೀವ್ ಗಾಂಧಿ ಕೊಂದವರ ಸಂಖ್ಯೆ 17,000. ಈಗ ನೀವೇ ಹೇಳಿ ಇವರಲ್ಲಿ ಅತೀ ಕ್ರೂರ ಕೊಲೆಗಾರ ಯಾರು?’ಎಂದು ಪ್ರಶ್ನಿಸಿದ್ದರು. ಆದರೆ ಇದು ಮತ್ತೊಂದು ವಿವಾದಕ್ಕೆ ಕಾರಣವಾಗುತ್ತಿದೆ ಎಂದು ಅರಿವಾದ ಕೂಡಲೇ ನಳಿನ್ ಕುಮಾರ್ ಕಟೀಲ್‌ ಟ್ವೀಟ್‌ ಅನ್ನು ಅಳಿಸಿ ಹಾಕಿದ್ದಾರೆ.

Comments are closed.