ಮಂಡ್ಯ: ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಬಳಕೆ ಮಾಡಿದ್ದ ವಾಹನಗಳ ಬಾಡಿಗೆ ಹಣ ನೀಡಿಲ್ಲ ಎಂದು ಖ್ಯಾತ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ವಿರುದ್ದ ಸುಮಲತಾ ಅಂಬರೀಶ್ ಬೆಂಬಲಿಗರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಮಾರು ಒಂದು ತಿಂಗಳ ಕಾಲ ಚುನಾವಣಾ ಪ್ರಚಾರಕ್ಕಾಗಿ ಬಳಸಲಾಗಿದ್ದ ಬಾಡಿಗೆ ವಾಹನಗಳ ಹಣ ಪಾವತಿ ಮಾಡಿಲ್ಲ, ಕ್ಷೇತ್ರದ ಮೂಲೆ ಮೂಲೆಗಳಿಗೂ ಸುಮಲತಾ ಅಂಬರೀಶ್ ತಮ್ಮ ಬೆಂಬಲಿಗರೊಟ್ಟಿಗೆ ಪ್ರಚಾರ ನಡೆಸಿದ್ದರು. ಆ ವೇಳೆ ಬಳಸಲಾಗಿದ್ದ ವಾಹನಗಳ ಬಾಡಿಗೆ ನೀಡಿಲ್ಲ ಎಂದು ಆಕ್ರೋಶಗೊಂಡಿದ್ದಾರೆ.
ರಾಕ್ಲೈನ್ ವೆಂಕಟೇಶ್ ಅವರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಚುನಾವಣೆ ಖರ್ಚು-ವೆಚ್ಚದ ಜವಾಬ್ದಾರಿ ವಹಿಸಿಕೊಂಡಿದ್ದರು. ಹೀಗಾಗಿ ಅವರು ಪ್ರಚಾರ ವಾಹನದ ಬಾಡಿಗೆ ನೀಡಿಲ್ಲ, ಹಣ ನೀಡಬೇಕು ಎಂದು ಸುಮಲತಾ ಅಂಬರೀಶ್ ಬೆಂಬಲಿಗರು ಸ್ವಾಭಿಮಾನಕ್ಕಾಗಿ ಸತ್ಯಾಗ್ರಹ ಎಂಬ ಹೆಸರಿನ ವಾಟ್ಸ್ಆಪ್ ಗೂಪ್ರಿನಲ್ಲಿ ಚರ್ಚೆಗಳು ನಡೆಯುತ್ತಿವೆ.
ನಿರ್ಮಾಪಕ ರಾಕ್ಲೈನ್ ವೆಂಕಟೇಶ್ಗೆ ಚುನಾವಣೆಯಲ್ಲಿ ಅಷ್ಟೊಂದು ಅನುಭವವಿಲ್ಲ, ಅವರಿಗೆ ಇದು ಹೊಸದು ಎಂದು ಸುಮಲತಾ ಪರ ಕೆಲಸ ಮಾಡಿದ ಕಾರ್ಯಕರ್ತರನ್ನು ಬೆಂಬಲಿಗರು ಸಮಾಧಾನಪಡಿಸಲು ಪ್ರಯತ್ನ ಮಾಡಿದ್ದಾರೆ.
ಮಂಡ್ಯ ಲೋಕಸಭಾ ಚುನಾವಣಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದಾರೆ.
Comments are closed.