ಕರ್ನಾಟಕ

ಸುಮಲತಾ ಪರ ಪ್ರಚಾರಕ್ಕೆ ಬಳಸಿದ್ದ ವಾಹನಗಳ ಬಾಡಿಗೆ ನೀಡಿಲ್ಲ- ರಾಕ್​ಲೈನ್​ ವಿರುದ್ಧ ಆಕ್ರೋಶ

Pinterest LinkedIn Tumblr


ಮಂಡ್ಯ: ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಬಳಕೆ ಮಾಡಿದ್ದ ವಾಹನಗಳ ಬಾಡಿಗೆ ಹಣ ನೀಡಿಲ್ಲ ಎಂದು ಖ್ಯಾತ ನಿರ್ಮಾಪಕ ರಾಕ್​​ಲೈನ್ ವೆಂಕಟೇಶ್ ವಿರುದ್ದ ಸುಮಲತಾ ಅಂಬರೀಶ್ ಬೆಂಬಲಿಗರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಮಾರು ಒಂದು ತಿಂಗಳ ಕಾಲ ಚುನಾವಣಾ ಪ್ರಚಾರಕ್ಕಾಗಿ ಬಳಸಲಾಗಿದ್ದ ಬಾಡಿಗೆ ವಾಹನಗಳ ಹಣ ಪಾವತಿ ಮಾಡಿಲ್ಲ, ಕ್ಷೇತ್ರದ ಮೂಲೆ ಮೂಲೆಗಳಿಗೂ ಸುಮಲತಾ ಅಂಬರೀಶ್ ತಮ್ಮ ಬೆಂಬಲಿಗರೊಟ್ಟಿಗೆ ಪ್ರಚಾರ ನಡೆಸಿದ್ದರು. ಆ ವೇಳೆ ಬಳಸಲಾಗಿದ್ದ ವಾಹನಗಳ ಬಾಡಿಗೆ ನೀಡಿಲ್ಲ ಎಂದು ಆಕ್ರೋಶಗೊಂಡಿದ್ದಾರೆ.

ರಾಕ್​ಲೈನ್​ ವೆಂಕಟೇಶ್​ ಅವರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಚುನಾವಣೆ ಖರ್ಚು-ವೆಚ್ಚದ ಜವಾಬ್ದಾರಿ ವಹಿಸಿಕೊಂಡಿದ್ದರು. ಹೀಗಾಗಿ ಅವರು ಪ್ರಚಾರ ವಾಹನದ ಬಾಡಿಗೆ ನೀಡಿಲ್ಲ, ಹಣ ನೀಡಬೇಕು ಎಂದು ಸುಮಲತಾ ಅಂಬರೀಶ್ ಬೆಂಬಲಿಗರು ಸ್ವಾಭಿಮಾನಕ್ಕಾಗಿ ಸತ್ಯಾಗ್ರಹ ಎಂಬ ಹೆಸರಿನ ವಾಟ್ಸ್​​ಆಪ್​ ಗೂಪ್ರಿನಲ್ಲಿ ಚರ್ಚೆಗಳು ನಡೆಯುತ್ತಿವೆ.

ನಿರ್ಮಾಪಕ ರಾಕ್​​ಲೈನ್ ವೆಂಕಟೇಶ್​​ಗೆ ಚುನಾವಣೆಯಲ್ಲಿ ಅಷ್ಟೊಂದು ಅನುಭವವಿಲ್ಲ, ಅವರಿಗೆ ಇದು ಹೊಸದು ಎಂದು ಸುಮಲತಾ ಪರ ಕೆಲಸ ಮಾಡಿದ ಕಾರ್ಯಕರ್ತರನ್ನು ಬೆಂಬಲಿಗರು ಸಮಾಧಾನಪಡಿಸಲು ಪ್ರಯತ್ನ ಮಾಡಿದ್ದಾರೆ.

ಮಂಡ್ಯ ಲೋಕಸಭಾ ಚುನಾವಣಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದಾರೆ.

Comments are closed.