ಬೆಂಗಳೂರು: ಲೋಕಸಭೆ ಹಾಗೂ ಕುಂದಗೋಳ ವಿಧಾನಸಭೆ ಉಪಚುನಾವಣೆಯಲ್ಲಿ ಸಕ್ರಿಯರಾಗಿ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಸೋಮವಾರ ಕುಟುಂಬ ಸಮೇತ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದಾರೆ.
ಭಾನುವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರೆದಿದ್ದ ರಾಜ್ಯ ನಾಯಕರ ಸಭೆಯಲ್ಲಿ ಪಾಲ್ಗೊಂಡು, ಸೋಮವಾರ ಬೆಳಗ್ಗೆ ಪತ್ನಿ ಹಾಗೂ ಮಕ್ಕಳೊಂದಿಗೆ ಒಂದು ವಾರ ಕಾಲ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಲೋಕಸಭೆ ಚುನಾವಣೆಗೆ ಮತದಾನ ಮುಗಿದ ತಕ್ಷಣವೇ ಕುಟುಂಬ ಸಮೇತರಾಗಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲು ಮುಂದಾಗಿದ್ದರು. ಆದರೆ, ಕುಂದಗೋಳ ಹಾಗೂ ಚಿಂಚೋಳಿ ಉಪ ಚುನಾವಣೆ ಘೋಷಣೆಯಾಗಿದ್ದರಿಂದ ಪಕ್ಷ ಕುಂದಗೋಳ ಉಪ ಚುನಾವಣೆಯ ಉಸ್ತುವಾರಿ ವಹಿಸಿದ್ದರಿಂದ ತಮ್ಮ ವಿದೇಶ ಪ್ರವಾಸವನ್ನು ಮುಂದೂಡಿದ್ದರು. ಈಗ ಚುನಾವಣೆ ಮುಕ್ತಾಯವಾಗಿದ್ದರಿಂದ ಒಂದು ವಾರ ಕಾಲ ರಾಜಕೀಯ ಗೊಂದಲದಿಂದ ದೂರ ಉಳಿಯಲು ಕುಟುಂಬ ಸಮೇತರಾಗಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ.
Comments are closed.