ಕರ್ನಾಟಕ

‘ಈ ಬಾರಿ ಗೆಲುವು ನನ್ನದೇ, ಎಳ್ಳಷ್ಟು ಅನುಮಾನವಿಲ್ಲ’

Pinterest LinkedIn Tumblr


ಚಾಮರಾಜನಗರ: ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಧ್ರುವನಾರಾಯಣ್ ಫುಲ್ ಖುಷಿಯಾಗಿದ್ದಾರೆ. ಗೆಲುವು ತಮ್ಮದೇ ಎಂದು ಹೇಳಿರುವ ಧ್ರುವ ನಾರಾಯಣ್, ಗೆದ್ದೆ ಗೆಲ್ಲುತ್ತೇನೆಂದು ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ನನ್ನ ಗೆಲುವು ಖಚಿತ. ಇದರಲ್ಲಿ ಎಳ್ಳಷ್ಟು ಅನುಮಾನವಿಲ್ಲ. ನನಗೆ ಸಂಪೂರ್ಣ ವಿಶ್ವಾಸ ಇದೆ ನಾವು ಗೆದ್ದೇ ಗೆಲ್ತೇವೆ. 50ರಿಂದ 1ಲಕ್ಷ ಮತಗಳ ಅಂತರದಲ್ಲಿ ಗೆಲ್ಲುವ ನಿರೀಕ್ಷೆ ಇದೆ. ಹೆಚ್ಚು ಸಮೀಕ್ಷೆಗಳು ಕೂಡ ನಮ್ಮ ಪರವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಏಜೆಂಟ್ ಮತ್ತು ಕಾರ್ಯಕರ್ತರ ಸಭೆಗೆ ಆಗಮಿಸಿದ ವೇಳೆ ಮಾತನಾಡಿದ ಧ್ರುವನಾರಾಯಣ್, ಗ್ರೌಂಡ್ ರಿಯಾಲಿಟಿ ನೋಡಿದ್ರೆ ನಮ್ಮ ಕಾರ್ಯಕರ್ತರು ಒಳ್ಳೆಯ ಕೆಲಸ ಮಾಡಿದ್ದಾರೆ. ಹಾಗಾಗಿ ಗೆಲುವು ಖಚಿತ ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದಿದ್ದಾರೆ.

ಚಾಮರಾಜನಗರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಧ್ರುವನಾರಾಯಣ್ ಸ್ಪರ್ಧಿಸಿದ್ರೆ, ಬಿಜೆಪಿ ಕಡೆಯಿಂದ ಶ್ರೀನಿವಾಸ್ ಪ್ರಸಾದ್ ಕಣಕ್ಕಿಳಿದಿದ್ದಾರೆ.

Comments are closed.