ಕರ್ನಾಟಕ

ಬೆಂಗಳೂರಿನಲ್ಲಿ ಸರ್ಕಾರಿ ಅಂಬುಲೆನ್ಸ್ – ಕಾರ್ ಪರಸ್ಪರ ಡಿಕ್ಕಿ; ಒಂದೇ ಕುಟುಂಬದ ಐವರ ದುರ್ಮರಣ, ಓರ್ವ ಬಾಲಕನ ಸ್ಥಿತಿ ಗಂಭೀರ

Pinterest LinkedIn Tumblr

ಬೆಂಗಳುರು: ಸಿಲಿಕಾನ್ ಸಿಟಿಯಲ್ಲಿ ನಡುರಾತ್ರಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೆಂಗಳೂರು ಯಲಹಂಕದ ಕೋಗಿಲು ಕ್ರಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣ ಸಾವಿಗೀಡಾಗಿದ್ದಾರೆ.

ರಾತ್ರಿ 12:30ಕ್ಕೆ ಸಂಭವಿಸಿದ ದುರ್ಘಟನೆಯಲ್ಲಿ ಸರ್ಕಾರಿ ಅಂಬುಲೆನ್ಸ್ ಹಾಗೂ ವ್ಯಾಗನಾರ್ ಕಾರ್ ಪರಸ್ಪರ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರಲ್ಲಿ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರಿದ್ದಾರೆ.

ಇವರೆಲ್ಲಾ ಪಶ್ಚಿಮ ಬಂಗಾಳ ಮೂಲದವಾರಗಿದ್ದು ದೀಪಕ್ (46), ಸಂಜಯ್ (45), ಮತ್ತು ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಒಬ್ಬ ಬಾಲಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿದ್ದವರು ಚೆನ್ನೈ ಕಡೆಯಿಂದ ಸಂಬಂಧಿಕರ ಮನೆಗೆ ಆಗಮಿಸುವುದಕ್ಕೆ ನಗರಕ್ಕೆ ಬಂದಿದ್ದರು.ಮೃತರ ಶವಗಳನ್ನು ಯಲಹಂಕ ಆಸ್ಪತ್ರೆಗೆ ಸಾಗಿಸಲಾಗಿದೆ. ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.