ಬೆಂಗಳೂರು: ಅಮರ್ ಮೇ 31ರಂದು ತೆರೆ ಕಾಣಲಿರುವ ಹಿನ್ನೆಲೆಯಲ್ಲಿ ಅಭಿಷೇಕ್ ಅಂಬರೀಶ್ಗೆ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಶುಭ ಹಾರೈಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಅವರು ಅಭಿಷೇಕ್ ಅಂಬರೀಶ್ ಇಬ್ಬರು ಜೊತೆಗೆ ನಿಂತು ಪೋಟೋ ತೆಗೆಸಿಕೊಂಡಿರುವ ಚಿತ್ರವನ್ನು ಇನ್ಸ್ಟಾಗ್ರಾಂನಲ್ಲಿ ಆಪ್ಲೋಡ್ ಮಾಡಿ, ರಾಜಕೀಯ ಮರೆತು ನೆಚ್ಚಿನ ಸ್ನೇಹಿತ ಅಭಿಷೇಕ್ಗೆ ಶುಭ ಹಾರೈಸುತ್ತೇನೆ ಜೊತೆಗೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೆದ್ದಿರುವ ಸುಮಲತಾ ಅಂಬರೀಶ್ ಅವರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ
ಅಲ್ಲದೇ ಈ ಚುನಾವಣೆಯ ಸೋಲಿನ ಸಂಪೂರ್ಣ ಹೊಣೆ ನನ್ನದೇ ಇದಕ್ಕೆ ಎಂಎಲ್ ಎ, ಎಂಎಲ್ ಸಿ, ಸಿಎಂ, ಜೆಡಿಎಸ್ ರಾಷ್ಟಾಧ್ಯಕ್ಷ ದೇವೇಗೌಡರು ಕಾರಣ ಅಲ್ಲ, ನಮ್ಮ ಕಾರ್ಯಕರ್ತರಿಗೆ ನಿರಾಸೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಇನ್ನು ನಾನು ಚುನಾವಣೆಯಲ್ಲಿ ಸೋತಿರಬಹುದು.ಆದರೆ, ಈ ಜರ್ನಿಯಲ್ಲಿ ಸಾಕಷ್ಟು ಕಲಿತಿದ್ದೀನಿ. ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಿಗೂ ಭೇಟಿ ಕೊಟ್ಟು ಸಮಸ್ಯೆ ಆಲೀಸುತ್ತೀನಿ. ಶೀಘ್ರದಲ್ಲೇ ಸುದ್ದಿಗೋಷ್ಠಿ ನಡೆಸಿ ಎಲ್ಲದರ ಬಗ್ಗೆ ಮಾಹಿತಿ ಕೊಡುತ್ತೀನಿ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಪರಾಜಿತಗೊಂಡ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
Comments are closed.