ಕರ್ನಾಟಕ

ಸ್ಥಳಿಯ ಸಂಸ್ಥೆಯ ಚುನಾವಣೆಯಲ್ಲಿ ಜೆಡಿಎಸ್​​ನವರು ಬಿಜೆಪಿ ಪರ ಕೆಲಸ ಮಾಡಿದ್ದಾರೆ’- ಸಚಿವ ಶಿವಾನಂದ ಪಾಟೀಲ್​

Pinterest LinkedIn Tumblr


ವಿಜಯಪುರ: ಸ್ಥಳಿಯ ಸಂಸ್ಥೆಯ ಚುನಾವಣೆಯಲ್ಲಿ ಜೆಡಿಎಸ್ ನವರು ಬಿಜೆಪಿ ಪರ ಕೆಲಸ ಮಾಡಿದ್ದಾರೆ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಆರೋಪ ಮಾಡಿದ್ದಾರೆ.

ವಿಜಯಪುರದ ಬಸವನ ಬಾಗೇವಾಡಿಯಲ್ಲಿ ಚುನಾವಣೆ ಫಲಿತಾಂಶ ಬಂದ ಬಳಿಕ ಶುಕ್ರವಾರ ಮಾಧ್ಯಮದ ಜೊತೆ ಮಾತನಾಡಿದ ಅವರು, ಚುನಾವಣೆಯಲ್ಲಿ ಜೆಡಿಎಸ್ ನಾಯಕರು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಲ್ಲದೇ ಜೆಡಿಎಸ್ ಗೆಲ್ಲಿಸುವುದಕ್ಕಿಂತಲೂ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದು ಜೆಡಿಎಸ್ ನಾಯಕರಿಗೆ ಮುಖ್ಯವಾಗಿತ್ತು. ಕಳೆದ ಲೋಕಸಭಾ ಚುನಾವಣೆಯಲ್ಲಿಯೂ ಜೆಡಿಎಸ್​​ನವರು ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡಿದ್ದಾರೆ ಎಂದರು.

ಇನ್ನು ಮೈತ್ರಿಯಿಂದಾಗಿ ನಮಗೆ ಸ್ವಲ್ಪ ಹಿನ್ನಡೆಯಾಗಿದೆ. ಇಲ್ಲಿನ ಜೆಡಿಎಸ್ ನಾಯಕರು ಯಾವಾಗ ಬಿಜೆಪಿ, ಯಾವಾಗ ಜೆಡಿಎಸ್ ಮಾಡ್ತಾರೆ ಅಂತಾ ಗೊತ್ತಾಗಲ್ಲ ಎಂದು ಅವರು ನುಡಿದರು.

ಸದ್ಯ ಬಸವನ ಬಾಗೇವಾಡಿ ಜನರು ಅಭಿವೃದ್ದಿಯ ಪರವಾಗಿ ಮತ ಹಾಕಿದ್ದಾರೆ. ಜನರು ನನ್ನ ಮೇಲೆ ನಂಬಿಕೆ ಇಟ್ಟು ಮತ ಚಲಾಯಿಸಿದ್ದಾರೆ ಎಂದು ವಿಜಯಪುರದ ಬಸವನ ಬಾಗೇವಾಡಿಯಲ್ಲಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಮಾತನಾಡಿದ್ದಾರೆ.

Comments are closed.