ಬೆಳಗಾವಿ: ಬೆಳಗಾವಿಯಲ್ಲಿ ಮಾತನಾಡಿದ ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ನೀಡಿದ್ರೆ ಒಳ್ಳೆಯದು. ಸ್ವಾಮೀಜಿ ಹೇಳಿಕೆ ಕುರಿತು ನನಗೆ ಗೊತ್ತಿಲ್ಲ. ಆದ್ರೆ ಡಿಸಿಎಂ ಹುದ್ದೆ ಕೊಟ್ರೆ ಒಳ್ಳೆಯದೇ. ಯಾವ ಜವಾಬ್ದಾರಿ ಕೊಟ್ರು ರಮೇಶ್ ಜಾರಕಿಹೊಳಿ ನಿಭಾಯಿಸ್ತಾರೆ. ರಮೇಶ್ ಜಾರಕಿಹೊಳಿ ಎಲ್ಲೂ ಹೋಗಿಲ್ಲ, ಇಲ್ಲೇ ಇದ್ದಾರೆ. ಹೀಗಾಗಿ ಮನವೊಲಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಇನ್ನು ಸಚಿವ ಸ್ಥಾನದ ಬಗ್ಗೆ ಮಾತನಾಡಿದ ಕುಮಟಳ್ಳಿ, ಆದ್ರೆ ನಾನು ಯಾವುದೇ ಸಚಿವ ಸ್ಥಾನ, ನಿಗಮ ಮಂಡಳಿ ಆಕಾಂಕ್ಷಿಯಲ್ಲ. ರಮೇಶ್ ಜಾರಕಿಹೊಳಿ ಯಾವುದೇ ಲಕ್ಷ್ಮಣ ರೇಖೆ ದಾಟಿಲ್ಲ ಎನ್ನುವ ಮೂಲಕ ಎಂ.ಬಿ.ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಕೃಷ್ಣ ನದಿಗೆ ಮಹಾರಾಷ್ಟ್ರದಿಂದ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕುಮಟಳ್ಳಿ, ನೀರು ತರುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ. 2 ತಿಂಗಳಿಂದ ಸತತ ಪ್ರಯತ್ನ ಮಾಡುತ್ತಿದ್ದಾರೆ. ಸಕಾರಾತ್ಮಕವಾಗಿ ಎಲ್ಲರೂ ಪ್ರಯತ್ನ ಮಾಡುತ್ತಿದ್ದೇವೆ. ಅವರಕೋಡ ಗ್ರಾಮದ ಬಳಿ ಬಾಂದಾರ್ ಕಟ್ಟಲು ಸಿದ್ದತೆ ಮಾಡಿಕೊಂಡಿದ್ದೇವೆ. ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ ನಡೆದಿದೆ. ಕೆಲ ತಾಂತ್ರಿಕ ತೊಂದರೆಯಿಂದ ವಿನಿಮಯ ಒಪ್ಪಂದ ಸಾಧ್ಯವಾಗಿಲ್ಲ ಎಂದಿದ್ದಾರೆ.
Comments are closed.