ಕರ್ನಾಟಕ

ಸರ್ಕಾರಿ ಗೌರವ, ಯಾವುದೇ ಧರ್ಮದ ಸಂಪ್ರದಾಯವಿಲ್ಲದೆ ಗಿರೀಶ್ ಕಾರ್ನಾಡ್ ಅಂತ್ಯಸಂಸ್ಕಾರ

Pinterest LinkedIn Tumblr

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಟ ಗಿರೀಶ್‌ ಕಾರ್ನಾಡ್‌ ಪಂಚಭೂತಗಳಲ್ಲಿ ಲೀನರಾದರು.

ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯ ನಿವಾಸದಲ್ಲಿ ಸೋಮವಾರ ಬೆಳಗ್ಗೆ ಗಿರೀಶ್‌ ಕಾರ್ನಾಡ್‌ (81) ನಿಧನರಾದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್‌ ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದರು.

ಗಿರೀಶ್ ಕಾರ್ನಾಡ್ ಅವರ ಅಂತ್ಯಸಂಸ್ಕಾರ ಬೆಂಗಳೂರಿನ ಬೈಯಪ್ಪನಹಳ್ಳಿ ಸಮೀಪ ಇರುವ ಕಲ್ಲಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ನೆರವೇರಿಸಲಾಯಿತು.. ಕಾರ್ನಾಡ್ ಅವರ ಕೋರಿಕೆ ಮೇರೆಗೆ ಯಾವುದೇ ಧರ್ಮದ ಸಂಪ್ರದಾಯ ಇಲ್ಲದೆ, ಸರಕಾರಿ ಗೌರವ ಇಲ್ಲದೇ ಸರಳವಾಗಿ ಅಂತ್ಯಸಂಸ್ಕಾರ ನಡೆಸಲಾಯಿತು.

ಗಿರೀಶ್‌ ಕಾರ್ನಾಡ್‌ ಹಿರಿಯ ಪುತ್ರ ರಘು ಕಾರ್ನಾಡ್‌ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಇದಕ್ಕೂ ಮುನ್ನ ಕೆಲವು ಗಣ್ಯರು ವಿದ್ಯುತ್‌ ಚಿತಾಗಾರಕ್ಕೆ ಭೇಟಿ ನೀಡಿ ಗಿರೀಶ್‌ ಕಾರ್ನಾಡ್‌ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಕನ್ನಡ ರಂಗಭೂಮಿಯ ಪತಾಕೆ ಮತ್ತಷ್ಟು ಎತ್ತರಕ್ಕೆ ಏರಿಸಿದ್ದ ಗಿರೀಶ್‌ ಕಾರ್ನಾಡ್‌

ಸಾರ್ವಜನಿಕರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಇರುವುದಿಲ್ಲ. ಅಂತಿಮ ದರ್ಶನ ಮಾಡಲು ಬಯಸುವವರು ಕಲ್ಲಹಳ್ಳಿ ಚಿತಾಗಾರಕ್ಕೆ ಬರಬೇಕೆಂದು ಕಾರ್ನಾಡ್ ಅವರ ಪುತ್ರ ರಘು ಕರ್ನಾಡ್ ಮನವಿ ಮಾಡಿದ್ದರು.

ಸಾರ್ವಜನಿಕ ದರ್ಶನಕ್ಕೆ ಮನೆಯಲ್ಲಿ ಅವಕಾಶವಿಲ್ಲ. ಬೈಯಪ್ಪನಹಳ್ಳಿಯ ಕಲ್ಲಹಳ್ಳಿ ವಿದ್ಯುತ್‌ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಿತು.

ಜ್ಞಾನಪೀಠ ಪ್ರಶಸ್ತಿ ಪಡೆದ 8 ಕನ್ನಡಿಗರ ಪೈಕಿ ಗಿರೀಶ್‌ ಕಾರ್ನಾಡ್‍‌ ಒಬ್ಬರು. ಗಿರೀಶ್‌ ಕಾರ್ನಾಡ್‌ ಮೇ 19, 1938ರಲ್ಲಿ ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ಕಾರ್ನಾಡ್‌ ಅವರ ತಂದೆ ಡಾ. ರಘುನಾಥ್‌ ಕಾರ್ನಾಡ್‌, ತಾಯಿ ಕೃಷ್ಣಾ ಬಾಯಿ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪ್ರಾಥಮಿಕ ಶಿಕ್ಷಣ ಹೊಂದಿದ ಗಿರೀಶ್‌ ಕಾರ್ನಾಡ್‌, ಧಾರವಾಡದ ಬಾಸೆಲ್‌ ಮಿಷನ್‌ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಪಡೆದಿದ್ದಾರೆ. ಪದವಿ ಶಿಕ್ಷಣವನ್ನು ಕರ್ನಾಟಕ ಕಾಲೇಜಿನಲ್ಲಿ ಪಡೆದಿರುವ ಕಾರ್ನಾಡ್‌ ಹೋರ್ಡ್ಸ್‌ ಸ್ಕಾಲರ್‌ಶಿಪ್‌ನೊಂದಿಗೆ ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಾಂಗಕ್ಕೆ ತೆರಳಿದರು.

ಆಕ್ಸ್‌ಫರ್ಡ್‌ ಡಿಬೇಟ್‌ ಕ್ಲಬ್‌ಗೆ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಈ ಗೌರವ ಪಡೆದ ಮೊದಲ ಏಷ್ಯಾದ ಪ್ರಜೆ ಎಂದೆನಿಸಿಕೊಂಡರು. ಬಹುಭಾಷಾ ಪಂಡಿತರೆಂಬ ಹಿರಿಮೆ ಪಡೆದಿರುವ ಕಾರ್ನಾಡ್‌, ಷಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಕಾರ್ನಾಡ್‌ ಸೇವೆ ಸಲ್ಲಿಸಿದ್ದಾರೆ.

ತಮ್ಮ ಓದು, ಚರ್ಚೆಯನ್ನು ದೇಶ ವಿದೇಶದಲ್ಲೂ ಹರಡಿ ವಿದ್ವಾಂಸರ ಸಖ್ಯದಲ್ಲಿ, ಕಲಾಸೇವಕರ ಸಹವಾಸದಲ್ಲಿ ಗುರ್ತಿಸಿಕೊಂಡ ಕಾರ್ನಾಡ್ ಬುದ್ಧಿಜೀವಿ ಎನಿಸಿಕೊಂಡರು. ಬಹುಭಾಷಾ ಪಂಡಿತರೆಂಬ ಹಿರಿಮೆಗೆ ಪಾತ್ರರಾಗಿ, ಷಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಕಾರ್ನಾಡ್ ಸೇವೆ ಸಲ್ಲಿಸಿದರು. ವಿದೇಶದಲ್ಲಿದ್ದಾಗಲೇ ಕನ್ನಡ ನಾಟಕಗಳನ್ನು ಬರೆದು ಇಲ್ಲಿಗೆ ಬಂದು ಹೊಸ ನಾಟಕಗಳ ಓದು, ಪ್ರದರ್ಶನಕ್ಕೆ ದಾರಿ ಮಾಡಿಕೊಂಡರು.

ಇವರು ಕನ್ನಡವಲ್ಲದೆ ಹಿಂದಿ, ಪಂಜಾಬಿ, ಮರಾಠಿ ಹಾಗೂ ಭಾರತೀಯ ಹಲವು ಭಾಷೆಗಳಿಗೆ ತಮ್ಮ ನಾಟಕಗಳು ಅನುವಾದಗೊಂಡು, ಪ್ರದರ್ಶನಗೊಂಡವು.

ಆಕ್ಸ್‌ಫರ್ಡ್‌ನಿಂದ ಬಂದ ನಂತರ ಮದ್ರಾಸ್‌ನಲ್ಲಿ ಆಕ್ಸ್ ಫ಼ರ್ಡ್ ಯೂನಿವರ್ಸಿಟಿ ಪ್ರೆಸ್ ನಲ್ಲಿ ಸಂಪಾದಕರಾಗಿ ನೌಕರಿಯಲ್ಲಿದ್ದು, ಅದನ್ನು ತೊರೆದು ಧಾರವಾಡಕ್ಕೆ ವಾಪಾಸಾಗಿ ನಾಟಕ ಕ್ಷೇತ್ರದಲ್ಲಿ ಕೃಷಿ ನಡೆಸಿದರು.

Comments are closed.