ಕರ್ನಾಟಕ

ಡಾಕ್ಟರನ್ನು ನಾಯಿಗೆ ಹೋಲಿಕೆ ಮಾಡಿಲ್ಲ, ಕ್ಷಮೆ ಕೇಳಲ್ಲ

Pinterest LinkedIn Tumblr


ಬೀದರ: ‘ಜನರಿಗಾಗಿ ಕೆಲಸ ಮಾಡುವವರು ಸೂಕ್ತವಾಗಿ ಕೆಲಸ ಮಾಡದಿದ್ದರೆ ನಾಯಿ ಕೂಡ ಮೂಸುವುದಿಲ್ಲ ಎಂದು ಹೇಳಿದ್ದೇನೆ. ಆದರೆ, ನಾನು ವೈದ್ಯರನ್ನು ನಾಯಿಗೆ ಹೋಲಿಸಿ ಮಾತಾಡಿಲ್ಲ. ಹೀಗಾಗಿ ಕ್ಷಮೆ ಕೇಳುವುದಿಲ್ಲ ‘ ಎಂದು ಸಂಸದ ಭಗವಂತ ಖೂಬಾ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಆಸ್ಪತ್ರೆಯ ವೈದ್ಯರ ಸಂಘ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಸಂಸದರು ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ನಾನು ತಪ್ಪೇ ಮಾಡಿಲ್ಲ. ಹೀಗಾಗಿ ಕ್ಷಮೆ ಕೇಳುವುದಿಲ್ಲ’ ಎಂದರು.

ವೈದ್ಯರು ರಾಜಕೀಯ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮುಚ್ಚಿ ಹಾಕಲು ಆರೋಪ ಮಾಡುತ್ತಿದ್ದಾರೆ. ಕ್ರೀಡಾ ಸಚಿವ ರಹೀಂ ಖಾನ್‌ ಅವರು ಬೀದರ್‌ ಬ್ರಿಮ್ಸ್‌ ಆಸ್ಪತ್ರೆಯ ಕಳಪೆ ಕಾಮಗಾರಿ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ಆಸ್ಪತ್ರೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸುವುದು ಹುಚ್ಚರ ಹೇಳಿಕೆ. ಸ್ವಕ್ಷೇತ್ರದಲ್ಲೇ ಕಳಪೆ ಕಾಮಗಾರಿ ನಡೆದಿರುವುದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.

Comments are closed.