ಸಸ್ಪೆಂಡ್ ಶಾಕ್ ಕೊಟ್ಟಿರೋ ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ, ಶಿವಾಜಿನಗರ ಶಾಸಕ ರೋಷನ್ ಬೇಗ್ ಮತ್ತೆ ತಿರುಗಿ ಬೀಳ್ತಾರಾ..? ಹೌದು ಎನ್ನುತ್ತಿದೆ ಸಧ್ಯದ ಬೆಳವಣಿಗೆ. ಸಸ್ಪೆಂಡ್ ಆದೇಶ ಹೊರಬೀಳುತ್ತಿರುವಂತೆ ಬೇಗ್ ಇಂದು ತುರ್ತು ಸುದ್ದಿಗೋಷ್ಠಿ ಕರೆದಿದ್ದು, ಸುದ್ದಿಗೋಷ್ಠಿಯಲ್ಲಿ ಮಹತ್ವದ ಬಾಂಬ್ ಸಿಡಿಸುವ ನೀರಿಕ್ಷೆ ಇದೆ.
ತಮ್ಮ ನಿವಾಸದಲ್ಲೇ ಬೇಗ್ ಸುದ್ದಿಗೋಷ್ಠಿ ಆಯೋಜಿಸಿದ್ದು, ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ರಾಜ್ಯ ಹಾಗೂ ಕೇಂದ್ರ ನಾಯಕರ ವಿರುದ್ಧ ಮಹತ್ವದ ವಿಚಾರಗಳನ್ನು ಬಹಿರಂಗಗೊಳಿಸುವ ಸಾಧ್ಯತೆ ಇದೆ. ಅಲ್ಲದೇ ರೋಷನ್ ಬೇಗ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾತು ಕೇಳಿಬಂದಿದ್ದು, ಈ ವಿಚಾರವೂ ಕೂಡ ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಇದೆ.
ನಿನ್ನೆ ಪಕ್ಷ ವಿರೋಧ ಚಟುವಟಿಕೆ ಹಿನ್ನೆಲೆಯಲ್ಲಿ ರೋಷನ್ ಬೇಗ್ರನ್ನು ಎಐಸಿಸಿ ಸಸ್ಪೆಂಡ್ ಮಾಡಿತ್ತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬೇಗ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಬಫೂನ್ಗಳು, ದುರಹಂಕಾರಿಗಳು ಎಂದೆಲ್ಲಾ ರೋಷನ್ ಬೇಗ್ ಬಹಿರಂಗ ಆರೋಪ ಮಾಡಿದ್ದರು. ಬೇಗ್ ನಡವಳಿಕೆಯಿಂದ ಪಕ್ಷಕ್ಕೆ ಮುಜುಗರವಾಗಿದೆ.ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಎಐಸಿಸಿಗೆ ಕೆಪಿಸಿಸಿ ಶಿಫಾರಸು ಮಾಡಿತ್ತು.
Comments are closed.