ಚಿಕ್ಕಮಗಳೂರು: ಜ್ಯೋತಿಷಿಯೊಬ್ಬನ ಮಾತು ಕೇಳಿ ವ್ಯಕ್ತಿಯೊಬ್ಬ ತನ್ನ ಒಂದೂವರೆಗೆ ತಿಂಗಳ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ ನಲ್ಲಿ ಘಟನೆ ನಡೆದಿದೆ. ಹೆಣ್ಣು ಮಗು ನಿನ್ನ ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ ಮಾತನ್ನು ನಂಬಿದ ಮಂಜುನಾಥ್ ಎಂಬಾತ ತಾಯಿ ಇಲ್ಲದ ಸಮಯದಲ್ಲಿ ತನ್ನ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಈ ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ಮಂಜುನಾಥ್ನನ್ನು ಬಂಧಿಸಿದ್ದಾರೆ. ಈತನಿಗೆ ಸಲಹೆ ನೀಡಿದ ಜ್ಯೋತಿಷಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
Comments are closed.