ಮಂಡ್ಯ: ಕಚೇರಿಯಲ್ಲಿಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ ಘಟನೆಯೊಂದು ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ತಾಲೂಕು ಕಚೇರಿಯಲ್ಲಿ ಜರುಗಿದೆ.
ಗೋವಿಂದ ಶೆಟ್ಟಿ ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ ಅಗಿರುವ ಇವರು ಮೂಲತಃ ಎಸ್.ಐ ಹೊನ್ನಲಗೆರೆ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ, ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳಿಗೆ ಕೂಡಲೇ ಗಣಕ ಯಂತ್ರದ ನೊಂದಣಿ ಮಾಡಿಸುವಂತೆ ಅಧಿಕಾರಿಗಳ ಸೂಚನೆ ಹಿನ್ನಲೆಯಲ್ಲಿ ಈ ರೀತಿ ಮಾಡಿಕೊಂಡಿದ್ದಾರೆ.
ತಹಶಿಲ್ದಾರ್ ಕೂಡಲೇ ಕೆಲಸ ನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಆ ಕ್ಷಣದಲ್ಲಿ ಕೆಲಸದ ಒತ್ತಡ ನಿಭಾಯಿಸಲಾರದೆ ಕಚೇರಿಯಲ್ಲೆ ವಿಷ ಸೇವಿಸಿದ್ದಾರೆ. ಸದ್ಯ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮದ್ದೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಘಟನೆ ಮದ್ದೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Comments are closed.