ಕರ್ನಾಟಕ

ಮಳೆಯ ಆರ್ಭಟ ಕ್ಕೆ ನಲುಗಿದ ರಾಜ್ಯ! ಬೆಂಗಳೂರಿಗೂ ವರುಣ ಸ್ಪರ್ಶ !!

Pinterest LinkedIn Tumblr


ನಿನ್ನೆ ಬೆಳಗ್ಗೆಯಿಂದಲೇ ರಾಜ್ಯದ ಹಲವೆಡೆ ಮೋಡ ಕವಿದ ವಾತಾರಣವಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ನಿನ್ನೆ ಬರುಣರಾಯ ತಂಪೆರೆದಿದ್ದಾನೆ.

ಬೆಂಗಳೂರಿನಲ್ಲಿ ನಿನ್ನೆ ಬೆಳಗ್ಗೆಯಿಂದಲೂ ಮೋಡ ಕವಿದಿದ್ದು, ಟೌನ್ ಹಾಲ್, ಶಿವಾನಂದ ಸರ್ಕಲ್, ಜಯನಗರ, ಮೈಸೂರು ರಸ್ತೆ, ಕಾರ್ಪೋರೇಷನ್, ಚಿಕ್ಕಪೇಟೆ, ಶಾಂತಿನಗರ, ಕೆ.ಆರ್.ಮಾರ್ಕೆಟ್ ಸೇರಿದಂತೆ ನಗರದ ಹಲವೆಡೆ ಧಾರಕಾರ ಮಳೆಯಾಗುತ್ತಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ.

ಬೆಂಗಳೂರಲ್ಲದೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಯೂ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಜಿಟಿ-ಜಿಟಿ ಮಳೆಯಾಗುತ್ತಿದೆ.

ಜೊತೆಗೆ ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕಳೆದ‌ ಎರಡು ಗಂಟೆಗಳಿಂದ ಧಾರಾಕಾರ ಮಳೆಸುರಿಯುತ್ತಿದ್ದು, ಮಳೆ ಇಲ್ಲದೆ ಕಂಗಲಾಗಿದ್ದ ರೈತನ ಮೊಗದಲ್ಲಿ ಸಂತಸ ಮೂಡಿದೆ.

ಇನ್ನೂ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಾದ್ಯಂತವು ಸಹ ಮೋಡ ಕವಿದ ವಾತಾವಾರಣವಿದ್ದು, ಕಳಸ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಬಣಕಲ್ ನಲ್ಲಿ ನಿನ್ನೆ ಮಧ್ಯಾಹ್ನದಿಂದಲೂ ಮಳೆಯಾಗುತ್ತಿದೆ.

Comments are closed.