ಕರ್ನಾಟಕ

ದೋಸ್ತಿ ಸರಕಾರ ಅಲ್ಪಮತಕ್ಕೆ ಕುಸಿದಿದ್ದು, ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು, ಇಲ್ಲದಿದರೆ ಉಗ್ರ ಹೋರಾಟ: ಯಡಿಯೂರಪ್ಪ

Pinterest LinkedIn Tumblr

ಬೆಂಗಳೂರು: ಸಮ್ಮಿಶ್ರ ಸರಕಾರದ 14 ಶಾಸಕರು ರಾಜೀನಾಮೆ ನೀಡಿದ್ದಾರೆ. ಸರಕಾರ ಈಗ ಅಲ್ಪಮತಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು. ವಿಧಾನಸಭೆ ವಿಸರ್ಜಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸುವುದಕ್ಕೂ ಮುನ್ನ ಯಡಿಯೂರಪ್ಪ ಮಾತನಾಡಿದರು.

ಮೈತ್ರಿ ಪಕ್ಷದ 13 ಶಾಸಕರು ಶನಿವಾರ ರಾಜೀನಾಮೆ ನೀಡಿದ್ದಾರೆ. ಸೋಮವಾರ ಮತ್ತೊಬ್ಬ ಶಾಸಕರು ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಸರಕಾರ ಅಲ್ಪಮತಕ್ಕೆ ಕುಸಿದಿದೆ. ತಾಂತ್ರಿಕವಾಗಿ ಸರಕಾರ ಬಹುಮತ ಕಳೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದರು.

ಸರಕಾರ ಬಹುಮತ ಕಳೆದುಕೊಂಡಿದೆ. ಅಧಿಕಾರದಲ್ಲಿ ಮುಂದುವರಿಯಲು ಎಚ್‌ಡಿ ಕುಮಾರಸ್ವಾಮಿ ನೈತಿಕತೆ ಇಲ್ಲ. ಕೂಡಲೇ ರಾಜೀನಾಮೆ ನೀಡಿ ಹೊರ ನಡೆಯಲಿ ಎಂದು ಬಿಎಸ್‌ ಯಡಿಯೂರಪ್ಪ ತಿಳಿಸಿದರು.

Comments are closed.