ಕರ್ನಾಟಕ

ಮಂಡ್ಯ ಎ.ಹುಲ್ಕೆರೆ ಗ್ರಾಮದ ಶಾಲೆಯ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ದುಷ್ಕರ್ಮಿಗಳು; 11 ಮಕ್ಕಳು ಅಸ್ವಸ್ಥ

Pinterest LinkedIn Tumblr

ಮಂಡ್ಯ: ಶಾಲೆಯ ನೀರಿನ ಟ್ಯಾಂಕಿಗೆ ದುಷ್ಕರಿಮಿಗಳು ವಿಷ ಬೆರೆಸಿದ್ದು ನೀರು ಸೇವಿಸಿದ 11 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಮಂಡ್ಯ ತಾಲೂಕಿನ ಎ.ಹುಲ್ಕೆರೆ ಗ್ರಾಮದ ಶಾಲೆಯ ನೀರಿನ ಟ್ಯಾಂಕಿಗೆ ವಿಷ ಬೆರೆಕೆಯಾಗಿದ್ದು ವಿಷ ಮಿಶ್ರಿತ ನೀರು ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ದರ್ಶನ್, ಧನುಷ್, ಶಿವಲಿಂಗ, ಯಶವಂತ್, ಮಯೂರ್, ಚಂದು, ಸೋಮಶೇಖರ್, ನಿಶಾ, ಪ್ರಜ್ವಲ್​ ಮತ್ತು ತೇಜು ಅಸ್ವಸ್ಥರು. ಅಸ್ವಸ್ಥರಾಗಿರುವ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಸರ್ಕಾರಿ ಪ್ರೌಢಶಾಲೆಯ ನೀರಿನ ಟ್ಯಾಂಕಿಗೆ ವಿಶ ಮಿಶ್ರಣವಾಗಿದೆ. ಆದರೆ ಇದನ್ನು ತಿಳಿದಿಲ್ಲದ ವಿದ್ಯಾರ್ಥಿಗಳು ನೀರು ಕುಡಿದಿದ್ದಾರೆ. ಇದೀಗ ಅಸ್ವಸ್ಥರಾಗಿರುವ ಮಕ್ಕಳನ್ನು ಕೊತ್ತತ್ತಿ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಅಸ್ವಸ್ಥರಾದ ವಿದ್ಯಾರ್ಥಿಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅವರನ್ನು ಮಂಡ್ಯ ಮಿಮ್ಸ್​ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಘಟನೆ ಕುರಿತಂತೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.