ಮೈಸೂರು: ಸರ್ಕಾರಕ್ಕೆ ಅಳಿವು ಉಳಿವಿನ ಪ್ರಶ್ನೆ ಒಂದೇಡೆ ಎದುರಾಗಿದ್ದು, ಇದರ ಬೆನ್ನಲ್ಲೇ ಜೆಡಿಎಸ್ ಸಚಿವರಾದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಬಿಜೆಪಿ ಸೇರಲಿದ್ದಾರೆ ಎನ್ನುವ ವದಂತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತೀದೆ.
ಜಿ.ಟಿ.ದೇವೇಗೌಡ ಬಿಜೆಪಿ ಸೇರಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲ ಬಿಜೆಪಿ ಕಾರ್ಯಕರ್ತರೂ ಜಿ . ಟಿ ದೇವೇಗೌಡ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದಾರೆ. ಜೆಡಿಎಸ್ ತೊರೆದು ಬಿಜೆಪಿ ಗೆ ಬನ್ನಿ ಎಂದು ಉನ್ನತ ಶಿಕ್ಷಣ ಸಚಿವರಿಗೆ ಆಹ್ವಾನ ನೀಡಿವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಅಸ್ತಿತ್ವದಲ್ಲಿ ಇರುವ ಮೈತ್ರಿ ಸರ್ಕಾರ ನಿಮಗೆ ಮೋಸ ಮಾಡಿದೆ. ಒಬ್ಬ ಮುಖ್ಯ ಮಂತ್ರಿಯನ್ನು ಸೋಲಿಸಿದ ನಿಮ್ಮನ್ನು ಸರಿಯಾದ ಕ್ರಮದಲ್ಲಿ ನಡೆಸಿಕೊಂಡಿಲ್ಲ. ಹುಣಸೂರಿನಲ್ಲಿಯೂ ನಿಮ್ಮ ಪುತ್ರನಿಗೆ ಅನ್ಯಾಯವಾಗಿದೆ. ಇದನ್ನೆಲ್ಲಾ ಮನಗಂಡು ಮರಳಿ ಬಿಜೆಪಿ ಆಗಮಿಸಬೇಕೆಂದು ಪೋಸ್ಟ್ ಹಾಕಲಾಗಿದೆ.
ಪ್ರಧಾನ ಮಂತ್ರಿ ಮೋದಿ ಅವರ ಕಾರ್ಯವೈಖರಿಗೆ ಮೆಚ್ಚಿದ ಜಿ.ಟಿ ದೇವೇಗೌಡ ಅವರು ಬಿಜೆಪಿಗೆ ಬರುತ್ತೀದ್ದಾರೆ. ಜೆಡಿಎಸ್ ತೊರೆದು ಬಿಜೆಪಿಗೆ ಬರುತ್ತಿದ್ದಾರೆ ಹೀಗಾಗಿ ನಾವು ಸ್ವಾಗತ ಮಾಡುತ್ತೇವೆ. ಮರಳಿ ಬಿಜೆಪಿಗೆ ಬನ್ನಿ ಎಂದು ಬಿಜೆಪಿ ಕಾರ್ಯಕರ್ತರು.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೇಲೆ ಪೋಸ್ಟ್ ಹಾಕಿ ಒತ್ತಾಯ ಮಾಡುತ್ತಿದ್ದಾರೆ. ಆದರೆ ಈ ಕುರಿತು ಜಿ.ಟಿ ದೇವೇಗೌಡರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
Comments are closed.