ಬೆಂಗಳೂರು: ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಅವನ್ನು ಬಿಜೆಪಿಯ ಅವರು ಅಪಹರಿಸಿ, ಮುಂಬೈ ಆಸ್ಪತ್ರೆಯಲ್ಲಿ ಬಲವಂತವಾಗಿ ದಾಖಲು ಮಾಡಿದ್ದಾರೆ. ಆರೋಗ್ಯವಾಗಿದ್ದೇನೆ ಎಂದು ಹೇಳಿದರೂ ಬಿಡದೆ ಮಾಜಿ ಶಾಸಕ ಲಕ್ಷ್ಮಣ್ ಸವದಿ ಮೂಲಕ ಅಪಹರಿಸಲಾಗಿದೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಸದನದಲ್ಲಿ ಗಂಭೀರ ಆರೋಪ ಮಾಡಿದ್ದಾರೆ.
ಭೋಜನ ವಿರಾಮದ ಬಳಿಕ ವಿಧಾನಸಭೆ ಕಲಾಪ ಪುನಾರಂಭಗೊಳ್ಳುತ್ತಲೇ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಮಂತ್ ಪಾಟೀಲ್ ಅವರ ಭಾವಚಿತ್ರ, ಇಂಡಿಗೋ ವಿಮಾನದಲ್ಲಿ ಶ್ರೀಮಂತ್ ಪಾಟೀಲ್ ಮತ್ತು ಲಕ್ಷ್ಮಣ್ ಸವದಿ ಒಟ್ಟಾಗಿ ಪ್ರಯಾಣಿಸಿದ ಟಿಕೆಟ್ನ ಚಿತ್ರಗಳನ್ನು ಸದನದಲ್ಲಿ ಪ್ರದರ್ಶಿಸಿದರು. ಜತೆಗೆ ಕಾಂಗ್ರೆಸ್ ಶಾಸಕರಿಗೆ ಅಗತ್ಯ ರಕ್ಷಣೆ ಕೊಡಬೇಕು ಎಂದು ಆಗ್ರಹಿಸಿದರು.
ಕುರ್ಚಿ ಆಸೆಗಾಗಿ ನಮ್ಮ ಶಾಸಕರನ್ನು ಏಕೆ ಅಪಹರಿಸುತ್ತಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸದನದಲ್ಲಿ ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು. ಇದಕ್ಕೆ ಗೋವಿಂದರಾಜನಗರ ಶಾಸಕ ಬಿಜೆಪಿಯ ವಿ. ಸೋಮಣ್ಣ ಆಕ್ಷೇಪಿಸಿದಾಗ ಕಲಾಪದಲ್ಲಿ ಭಾರಿ ಗದ್ದಲ ಉಂಟಾಯಿತು.
Comments are closed.