ಕರ್ನಾಟಕ

ಬೆಂಗಳೂರಿನಲ್ಲಿ 144 ಸೆಕ್ಷನ್​​​ ಜಾರಿ! ಎರಡು ದಿನಗಳ ಪಬ್​, ಬಾರ್​ಗಳು ಕ್ಲೋಸ್​​​!

Pinterest LinkedIn Tumblr


ನಗರದಲ್ಲಿ ರಾಜಕೀಯ ಬೃಹನ್ನಾಟಕಗಳು ಮುಂದುವರಿದಿರೋದರಿಂದ ಹಾಗೂ ಹಲವೆಡೆ ಕೈ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ.

ನಗರ ಪೊಲೀಸ್ ಕಮೀಷನರ್ ಅಲೋಕ್ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದು, ಇಂದು ಸಂಜೆ 6 ಗಂಟೆಯಿಂದ 25 ತಾರೀಕು ಮಧ್ಯಾಹ್ನ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದೆ.

ಇದರೊಂದಿಗೆ ನಗರದ ಎಲ್ಲ ಬಾರ್​ ಆ್ಯಂಡ್ ರೆಸ್ಟೋರೆಂಟ್​​ ಹಾಗೂ ಪಬ್​​ಗಳು ಮತ್ತು ಮದ್ಯ ಮಾರಾಟಕ್ಕೂ ನಿಷೇಧ ಹೇರಿ ಇಲಾಖೆ ಆದೇಶ ಹೊರಡಿಸಿದೆ. ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮಾರಕಾಸ್ತ್ರಗಳನ್ನು ಸಂಗ್ರಹಿಸುವುದು, ಸಾಗಿಸುವುದಕ್ಕೆ ಪೊಲೀಸ್ ಇಲಾಖೆ ನಿಷೇಧ ಹೇರಿದೆ.

ಈ ಕುರಿತು ವಿವರಣೆ ನೀಡಿರುವ ಅಲೋಕ್ ಕುಮಾರ್, ನಗರದಲ್ಲಿ ಅಲ್ಲಲ್ಲಿ ಜನರು ಗುಂಪಾಗಿ ಸೇರುವುದು ಹಾಗೂ ಕಾನೂನು ಚಟುವಟಿಕೆಯಲ್ಲಿ ತೊಡಗಿರುವುದನ್ನು ಗಮನಿಸಿದ್ದೇವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಹೇರಲಾಗಿದೆ ಎಂದಿದ್ದಾರೆ.

Comments are closed.