ಕರ್ನಾಟಕ

ಯಾವುದೇ ಕಾರಣಕ್ಕೂ ಪಕ್ಷಕ್ಕೆ ಹಿಂದಿರುಗುವ ಪ್ರಶ್ನೆ ಇಲ್ಲ: ಎಚ್‌ ವಿಶ್ವನಾಥ್‌

Pinterest LinkedIn Tumblr

0
ಮುಂಬಯಿ: ನಾನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ವಾಪಸ್ ಮರಳುವ ಪ್ರಶ್ನೆಯೇ ಇಲ್ಲ. ನನ್ನನ್ನು ಸಂಪರ್ಕಿಸಿ ಮನವೊಲಿಸುವ ಧೈರ್ಯ ಯಾವ ನಾಯಕರಿಗೂ ಇಲ್ಲ ಎಂದು ಅತೃಪ್ತ ಶಾಸಕ ಎಚ್‌. ವಿಶ್ವಾನಾಥ್‌ ತಿಳಿಸಿದ್ದಾರೆ.

ಮುಂಬಯಿಯಲ್ಲಿ ಜೆಡಿಎಸ್ ಅತೃಪ್ತ ಶಾಸಕ ಎಚ್.ವಿಶ್ವನಾಥ್ ಹೇಳಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಸರಕಾರ ನಮಗೆ ಬೇಡವಾಗಿತ್ತು. ಅದು ಈಗ ಪತನಗೊಂಡಿದೆ. ನಾವು ಯಾವುದೇ ಒತ್ತಡಕ್ಕೆ ಅಥವಾ ಪ್ರಭಾವಕ್ಕೆ ಒಳಗಾಗಿಲ್ಲ ಎಂದರು.

ಮತ್ತೊಬ್ಬ ಶಾಸಕ ಬಿ.ಸಿ.ಪಾಟೀಲ್ ಕೂಡ ಈ ಸಂದರ್ಭದಲ್ಲಿ ಮಾತನಾಡಿದರು.

ರಾಜಕೀಯದಿಂದ ನಿವೃತ್ತಿಯಾದರೂ ಸರಿ ನನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ. ನನ್ನನ್ನು ಇದುವರೆಗೂ ಯಾರು ಕೂಡ ಸಂಪರ್ಕ ಮಾಡಿಲ್ಲ, ಮೂವರು ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ತೀರ್ಮಾನದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಬಿಸಿ ಪಾಟೀಲ್‌ ತಿಳಿಸಿದರು.

Comments are closed.