ಬೆಂಗಳೂರು: ಸೋಮವಾರ ರಾತ್ರಿ ಇದ್ದಕ್ಕಿಂದ್ದಂತೆ ನಾಪತ್ತೆಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಅಳಿಯ ಸಿದ್ಧಾರ್ಥ್ ಅವರಿಗಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದ್ದು, ಅವರು ಮೂಲತಃ ಚಿಕ್ಕಮಗಳೂರು ಜಿಲ್ಲೆಯವರಾಗಿದ್ದಾರೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಮರಗೋಡು ಸಮೀಪ 20 ಸಾವಿರ ಎಕರೆ ಕಾಫಿತೋಟವನ್ನು ಹೊಂದಿದ್ದು, ಎಬಿಸಿ ಕಾಫಿ ಕ್ಯೂರಿಂಗ್, ಅಂಬರವೇಲಿ ವಸತಿ ಶಾಲೆ ಹಾಗೂ ಸಾರೈ ಹೋಟೆಲ್ನ್ನು ನಡೆಸುತ್ತಿದ್ದರು.
ಕೆಫೆ ಕಾಫಿ ಡೇ ಸಂಸ್ಥಾಪಕರಾಗಿರುವ ಅವರು ಬೆಂಗಳೂರು ಸೇರಿದಂತೆ ದೇಶದ ಅನೇಕ ಕಡೆ ಕಾಫಿ ಡೇ ಹೊಂದಿದ್ದಾರೆ. ಮೂರು ವರ್ಷಗಳ ಹಿಂದೆ ಸಿದ್ಧಾರ್ಥ್ ತಂದೆ ಗಂಗಹೆಗ್ಡೆ ಹಾಗೂ ಮಾವ ಎಸ್.ಎಂ. ಕೃಷ್ಣ ಹೆಸರಿನಲ್ಲಿ ಬಡರೋಗಿಗಳಿಗೆ ಉಚಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಶಂಕು ಸ್ಥಾಪನೆ ಮಾಡಿದ್ದರು.
ಅವರು ನಾಪತ್ತೆಯಾದ ಹಿನ್ನೆಲೆಯಲ್ಲಿ ಕಾಫಿ ತೋಟ ಕಾರ್ಮಿಕರು, ಕಾಫಿ ಕ್ಯೂರಿಂಗ್ ಸೇರಿದಂತೆ ಶಾಲಾ ಕಾಲೇಜು ವಿಧ್ಯಾರ್ಥಿಗಳಲ್ಲಿ ನೀರವ ಮೌನ ಆವರಿಸಿದೆ.
Comments are closed.