ಬೆಂಗಳೂರು: ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಅಳಿಯ ಸಿದ್ಧಾರ್ಥ ನನಗೆ ತುಂಬಾ ಪರಿಚಿತ ವ್ಯಕ್ತಿ. ಭಾನುವಾರ ರಾತ್ರಿ ಕರೆ ಮಾಡಿದ್ದ ಅವರು ತಕ್ಷಣವೇ ಭೇಟಿಯಾಗಬೇಕು ಎಂದಿದ್ದರು. ಅದಕ್ಕೆ ಆಯಿತು ಎಂದಿದ್ದೆ. ಆದರೆ,ಈಗ ದಿಢೀರ್ ನಾಪತ್ತೆಯಾಗಿದ್ದಾರೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಮಂಗಳವಾರ ಮಧ್ಯಾಹ್ನ ಟ್ವೀಟ್ ಮಾಡಿರುವ ಡಿ.ಕೆ. ಶಿವಕುಮಾರ್, ಕೆಫೆ ಕಾಫಿ ಡೇ ಮಾಲೀಕರಾಗಿದ್ದ ಸಿದ್ಧಾರ್ಥ ಅವರು ತಮ್ಮ ಸಿಬ್ಬಂದಿಗೆ ಬರೆದಿದ್ದಾರೆ ಎನ್ನಲಾದ ಪತ್ರ ಜು.27ರಿಂದಲೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಪತ್ರದ ಕುರಿತು ತನಿಖೆಯಾಗಬೇಕು ಎಂದು ಟ್ವೀಟ್ನಲ್ಲಿ ಆಗ್ರಹಿಸಿದ್ದಾರೆ.
ಸಿದ್ಧಾರ್ಥ ತುಂಬಾ ಧೈರ್ಯದ ವ್ಯಕ್ತಿ. ತೀವ್ರವಾದ ಒತ್ತಡಕ್ಕೆ ಸಿಲುಕಿ ದಿಢೀರನೆ ನಾಪತ್ತೆಯಾಗುತ್ತಾರೆ ಎಂದರೆ ನಂಬಲು ತುಂಬಾ ಕಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.
ಸೂಕ್ತ ತನಿಖೆ ನಡೆಸುವಂತೆ ಸಿಎಂಗೆ ಹೇಳುತ್ತೇನೆ: ಅಶೋಕ್
ಸಿದ್ಧಾರ್ಥ ನನಗೆ ತುಂಬಾ ಆತ್ಮೀಯ ಸ್ನೇಹಿತರಾಗಿದ್ದರು. ಲಕ್ಷಾಂತರ ಜನಕ್ಕೆ ಉದ್ಯೋಗ ಕೊಟ್ಟಿದ್ದರು. ಸಮಾಜಕ್ಕೆ ಒಳ್ಳೆಯದನ್ನು ಮಾಡುತ್ತಿದ್ದರು. ಅದರೆ ಅವರೆಂದೂ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿರಲಿಲ್ಲ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಅವರು ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಐಟಿ ಇಲಾಖೆಯ ದಾಳಿ ಅದು ಅವರ ವೈಯಕ್ತಿಕ ವಿಚಾರ. ಆದರೆ, ಅವರ ಆಸ್ತಿಗಿಂತ ಸಾಲವೇ ಹೆಚ್ಚಾಗಿದೆ. ಇವರ ನಾಪತ್ತೆ ನಿಗೂಢವಾಗಿರುವುದರಿಂದ, ಸೂಕ್ತ ತನಿಖೆಗೆ ಆದೇಶಿಸುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಆಗ್ರಹಿಸುವುದಾಗಿ ತಿಳಿಸಿದರು.
Comments are closed.