ಮಡಿಕೇರಿ: ಭಾರೀ ಮಳೆ, ಪ್ರವಾಹದಿಂದ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಹಾಗೀ ಶಾಲೆಗಳು ಪರಿಹಾರ ಕೇಂದ್ರಗಳನ್ನಾಗಿ ಮಾಡಿದ್ದರಿಂದ ಆ.13 ಮತ್ತು 14ರಂದು ಕೊಡಗಿನ ಎಲ್ಲಾ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಶಾಲೆಗಳಲ್ಲಿಯೇ ಪರಿಹಾರ ಶಿಬಿರ ತೆರೆಯಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ, ಕಾಲೇಜಿಗೆ ಮತ್ತೆ ಎರಡು ದಿನ ರಜೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
Comments are closed.