ಬೆಂಗಳೂರು: ಮೈತ್ರಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಮೂರು ಪಕ್ಷಗಳ ಕೆಲ ಮುಖಂಡರು, ಪತ್ರಕರ್ತರು ಹಾಗೂ ಅಧಿಕಾರಿಗಳು ಸೇರಿ 300 ಜನರ ಫೋನ್ ಟ್ಯಾಪ್ ಮಾಡಿಸಿದ್ದರು ಎಂಬ ಗಂಭೀರ ಆರೋಪ ಕೇಳಬಂದಿದೆ. ಈ ಆರೋಪ ಸಂಬಂಧ ಇಂದು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್ಡಿಕೆ, ಇದು ಸತ್ಯಕ್ಕೆ ದೂರವಾದ ಆರೋಪ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ವಿಚಾರವಾಗಿ ಇಂದು ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೇ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ. ಈ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೇ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ. ಈ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮೈತ್ರಿ ಸರ್ಕಾರ ಕೆಡವಲು ಪ್ರಯತ್ನಿಸುತ್ತಿದ್ದವರ ಮುಖಂಡರ ಫೋನ್ಗಳನ್ನು ಟ್ಯಾಪ್ ಮಾಡಿಸಿ, ಅವರ ಉಪಾಯವನ್ನು ತಿಳಿದುಕೊಳ್ಳುತ್ತಿದ್ದರು ಎಂಬ ಆರೋಪ ಕೇಳಬಂದಿದೆ. ಸುಮಾರು 300 ಜನರ ಫೋನ್ಗಳನ್ನು ಅವರು ಟ್ಯಾಪ್ ಮಾಡಿಸಿದ್ದರು ಎನ್ನಲಾಗಿದೆ.
ಮೈತ್ರಿ ಸರ್ಕಾರದ ಅವಧಿಯಲ್ಲಿ ಫೋನ್ ಟ್ಯಾಪ್ ಆಗಿದ್ದರ ಬಗ್ಗೆ ಡಿಜಿಪಿಗೆ ವರದಿ ಸಲ್ಲಿಕೆಯಾಗಿದ್ದು, ಈ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
Comments are closed.