ಕರ್ನಾಟಕ

ರಾಜೀನಾಮೆ ನೀಡಿದ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಪಾಕ್ ಗೆ ಹೋಗಲಿ: ಸಂಸದ ಅನಂತ್ ಕುಮಾರ್ ಹೆಗಡೆ

Pinterest LinkedIn Tumblr


ಬೆಂಗಳೂರು: ರಾಜೀನಾಮೆ ನೀಡಿದ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್, ಇಲ್ಲೆ ಇದ್ದು ದೇಶ ಒಡೆಯುವ ಬದಲು ಪಾಕ್ ಗೆ ಹೋಗಿ ನಮ್ಮ ದೇಶದ ವಿರುದ್ದ ಹೋರಾಟ ಮಾಡಲಿ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಕಿಡಿಕಾರಿದ್ದಾರೆ.

ಐಎಎಸ್ ಅಧಿಕಾರಿ ರಾಜೀನಾಮೆ ವಿಚಾರವಾಗಿ ಸರಣಿ ಟ್ವೀಟ್ ಮಾಡಿದ ಅವರು, ಸಸಿಕಾಂತ್ ಸೆಂಥಿಲ್ ಮೊದಲು ಮಾಡಬೇಕಾದ ಕೆಲಸವೇನೆಂದರೆ, ತನ್ನ ನಿಲುವು ಬೆಂಬಲಿಸಿದವರ ಜೊತೆಗೆ ಪಾಕ್ ಗೆ ವಲಸೆ ಹೋಗಲಿ, ಇದು ಪ್ರಾಯೋಗಿಕವಾಗಿ ಸುಲಭ ಮತ್ತು ಅಂತಿಮ ಪರಿಹಾರ.

ಇಲ್ಲಿಯೇ ಇದ್ದು ನಮ್ಮ ದೇಶದ ವಿರುದ್ಧ ಅಸಹನೆ ವ್ಯಕ್ತಪಡಿಸುವುದರ ಬದಲು ಪಾಕಿಸ್ತಾನ ಕ್ಕೆ ಹೋಗಿ ನಮ್ಮ ದೇಶದ ವಿರುದ್ಧ ಹೋರಾಟ ಮಾಡುವುದು ಒಳಿತು. ಇದರಲ್ಲಾದರೂ ಅವರು ತಮ್ಮ ನಿಯತ್ತು ತೋರಿಸಲಿ ಎಂದು ಹರಿಹಾಯ್ದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ತಮ್ಮ ಹುದ್ದೆಗೆ ಶುಕ್ರವಾರ ದಿಢೀರ್ ರಾಜಿನಾಮೆ ಸಲ್ಲಿಸಿದ್ದರು. ತಮಿಳುನಾಡಡು ಮೂಲದ ಸೆಂಥಿಲ್ 2009 ರ ಬ್ಯಾಚ್ ನ ಐಎಎಸ್ ಅಧಿಕಾರಿ. 2009 ಮತ್ತು 2012ರ ಅವಧಿಯಲ್ಲಿ ಬಳ್ಳಾರಿಯಲ್ಲಿ ಸಹಾಯಕ ಆಯುಕ್ತರಾಗಿ ಕೆಲಸ ಮಾಡಿದ್ದರು. ಬಳಿಕ ಎರಡು ಅವಧಿಗೆ ಶಿವಮೊಗ್ಗ ಜಿ. ಪಂ. ಸಿಇಓ ಆಗಿದ್ದರು. ಅನಂತರದ ವರ್ಷಗಳಲ್ಲಿ ಚಿತ್ರದುರ್ಗ ಮತ್ತು ರಾಯಾಚೂರು ಜಿಲ್ಲಾಧಿಕಾರಿಯಾಗಿ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ 2016ರ ತನಕ ಸೇವೆ ಸಲ್ಲಿಸಿದ್ದರು.

Comments are closed.