
ಮೈಸೂರು: ದಲಿತರ ಮೇಲಿನ ಶೋಷಣೆ ಕುಗ್ಗಿಸಲು ಉದ್ದೇಶದಿಂದ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಬುಧವಾರ ಮೈಸೂರಿನ ದಲಿತ ಕೇರಿಯಲ್ಲಿ ಸಾಮರಸ್ಯದ ಪಾದಯಾತ್ರೆ ಮಾಡಿದರು.
ಮೈಸೂರಿನ ಮಂಜುನಾಥಪುರ ಬಡಾವಣೆಯ ದಲಿತರ ಮನೆಗೆ ಭೇಟಿ ನೀಡಿದ ಪೇಜಾವರ ಶ್ರೀಗಳಿಗೆ ದಲಿತ ಮನೆಯ ಕುಟುಂಬಸ್ಥರು ಗೌರವಿಸಿ, ಆರ್ಶಿವಾದ ಪಡೆದರು. ಚೌಡಪ್ಪ, ರಾಜಮ್ಮ ಎಂಬ ದಂಪತಿಯ ಮನೆಗೆ ಪೇಜಾವರ ಶ್ರೀಗಳು ಭೇಟಿ ನೀಡಿದ್ದರು. ಈ ವೇಳೆ ಶ್ರೀಗಳಿಗೆ ತುಳಸಿ ಮಾಲೆ ಅರ್ಪಿಸಿ, ಪಾದಪೂಜೆ ಸಲ್ಲಿಸಲಾಯಿತು. ಅನಾರೋಗ್ಯದ ಹಿನ್ನೆಲೆಯಲ್ಲಿ ವೀಲ್ಚೇರ್ನಲ್ಲಿ ಕುಳಿತು ಪೇಜಾವರ ಶ್ರೀಗಳು ಪಾದಯಾತ್ರೆಯಲ್ಲಿ ಭಾಗಿಯಾದರು.
ಇದನ್ನು ಓದಿ: ಡಿಕೆಶಿ ಬಂಧನ ವಿರೋಧಿಸಿ ಒಕ್ಕಲಿಗರ ಬೃಹತ್ ಪ್ರತಿಭಟನೆಗೆ ಬೆಚ್ಚಿದ ಬಿಜೆಪಿ: ಹೈ ಕಮಾಂಡ್ಗೆ ಮಾಹಿತಿ ರವಾನೆ
ಡಿಕೆಶಿ ಪರವಾಗಿ ಇಂದು ಮಠಾಧೀಶರು ಪ್ರತಿಭಟನೆಯಲ್ಲಿ ಭಾಗಿಯಾದ ವಿಚಾರವಾಗಿ ಪ್ರತಿಕ್ರಿಯಿಸಿದ ಪೇಜಾವರ ಶ್ರೀಗಳು, ನಾನು ಈ ವಿಚಾರದ ಬಗ್ಗೆ ಮಾತನಾಡುವುದಿಲ್ಲ, ತಟಸ್ಥವಾಗಿರುತ್ತೇನೆ. ಅವರಿಗೆ ಡಿಕೆಶಿ ನಿರಪಾರಾಧಿ ಅಂತ ತೋರಿದೆ. ಆ ಕಾರಣದಿಂದ ಅವರು ಬೆಂಬಲಿಸುತ್ತಿರಬಹುದು. ಈ ವಿಚಾರದಲ್ಲಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
Comments are closed.